ಚನ್ನರಾಯಸ್ವಾಮಿ ಬೆಟ್ಟದಲ್ಲಿ ಹಲವಾರು ರೀತಿಯ ಔಷಧೀಯ ಸಸ್ಯ ಸಂಪತ್ತು ಹಾಗೂ ಕಿರು ಜಲಪಾತ ಇರು
ವುದರಿಂದ ಸಾರ್ವಜನಿಕರ ಅತಿಕ್ರಮ ಪ್ರವೇಶವನ್ನು ನಿಷೇಧಿಸಲಾಗಿದೆ. ಆದರೆ, ಈ ನಿಯಮ ಕಳೆದ ಮೂರು ವಾರಗಳಿಂದ ಕಟ್ಟುನಿಟ್ಟಾಗಿ ಪಾಲನೆಯಾಗುತ್ತಿಲ್ಲ. ಅರಣ್ಯ ಇಲಾಖೆ ಸಿಬ್ಬಂದಿ ಕೆಲವರಿಂದ ಹಣ ಪಡೆದು, ಜೋರು ಮಾಡುವವರಿಂದ ಹಣ ಪಡೆಯದೇ ಬೆಟ್ಟಕ್ಕೆ ಪ್ರವೇಶ ನೀಡುತ್ತಿದ್ದಾರೆ ಎಂದು ಚಿಕ್ಕರಾಯಪ್ಪನಹಳ್ಳಿ ಗ್ರಾಮದ ಸಾರ್ವಜನಿಕರು ಆರೋಪಿಸಿದ್ದಾರೆ.