ಕಾನೂನು ಮಾಪನ ಶಾಸ್ತ್ರ ಇಲಾಖೆ ಸಹಾಯಕ ನಿರ್ದೇಶಕ ರವೀಶ್ ಮಾತನಾಡಿ,‘ಪಡಿತರ ವಿತರಣೆಯ ತೂಕದಲ್ಲಿ ವಂಚನೆ ಆಗುತ್ತಿತ್ತು. ನ್ಯಾಯಬೆಲೆ ಅಂಗಡಿಯ ಮಾಲೀಕ ನರಸಿಂಹರಾಜು ಅವರು ಪಡೆದಿದ್ದ ಪರವಾನಗಿಯನ್ನು ರದ್ದು ಮಾಡುವಂತೆ ಜಿಲ್ಲಾಧಿಕಾರಿಗೆ ವರದಿ ಸಲ್ಲಿಸಲಾಗಿದೆ. ಅಲ್ಲದೆ, ಮಾಲೀಕನ ವಿರುದ್ಧವೂ ಕ್ರಮ ಕೈಗೊಳ್ಳುವಂತೆ ತಿಳಿಸಲಾಗಿದೆ’ ಎಂದು ಹೇಳಿದರು.