ಅರ್ಕಾವತಿ ನದಿ ಪಾತ್ರದ ಜಲ ಮೂಲಗಳಿಗೆ ವಿಷಯುಕ್ತ ಹಾಗೂ ತ್ಯಾಜ್ಯಗಳನ್ನು ಹರಿಸುತ್ತಿರುವವರ ವಿರುದ್ದ ಕಠಿಣ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಅರ್ಕಾವತಿ ನದಿ ಪಾತ್ರದ ಕೆರೆಗಳ ಸಂರಕ್ಷಣಾ ವೇದಿಕೆ ಹಾಗೂ ದೊಡ್ಡತುಮಕೂರು ಮಜರಾಹೊಸಹಳ್ಳಿ ಗ್ರಾಮ ಪಂಚಾಯಿತಿ ಕೆರೆ ಹೋರಾಟ ಸಮಿತಿ ನೇತೃತ್ವದಲ್ಲಿ ಹೋರಾಟ ತೀವ್ರಗೊಂಡ ಹಿನ್ನೆಲೆಯಲ್ಲಿ ಶುಕ್ರವಾರ ಬೆಳಿಗ್ಗೆ ಕಾರ್ಖಾನೆಯೊಂದರಲ್ಲಿ ಬಟ್ಟೆ ತೊಳೆದ ನಂತರ ಬರುವ ರಾಸಾಯನಿಕ ಮಿಶ್ರಿತ ತ್ಯಾಜ್ಯ ನೀರನ್ನು ಬಿಸವನಹಳ್ಳಿ ರಾಜಕಾಲುವೆಯ ಕಡೆ ಬಿಡಲಾಗಿದೆ ಎಂದು ಸ್ಥಳೀಯರಾದ ಯಲ್ಲಪ್ಪ, ನಾರಾಯಣಸ್ವಾಮಿ ಆರೋಪಿಸಿದ್ದಾರೆ.