<p><strong>ದೊಡ್ಡಬಳ್ಳಾಪುರ:</strong> ಒಂದು ವಾರದಿಂದಲು ಪಂಚಗಿರಿ ಶ್ರೇಣಿಯಲ್ಲಿ ಭಾರಿ ಪ್ರಮಾಣದಲ್ಲಿ ಮಳೆ ಸುರಿದ ಪರಿಣಾಮ ಜಕ್ಕಲಮೊಡಗು ಜಲಾಶಯ ತುಂಬಿ ಹರಿಯುತ್ತಿದೆ.</p>.<p>ಜಲಾಶಯದ ಹಿನ್ನೀರಿನ ಮಟ್ಟ ಹೇರಿಕೆಯಾಗಿ ಗುಂಗೀರ್ಲಹಳ್ಳಿ ಬಳಿ ಚಿಕ್ಕಬಳ್ಳಾಪುರ, ದೊಡ್ಡಬಳ್ಳಾಪುರ ಸಂಪರ್ಕ ಸೇತುವೆ ಮೇಲೆ ನೀರು ಹರಿಯುತ್ತಿವೆ. ಹೀಗಾಗಿ ಸೇತುವೆ ಮೇಲೆ ಸಂಚರಿಸುವ ವಾಹನ ಸವಾರರು ಜೀವ ಕೈಯಲ್ಲಿಡಿದು ಓಡಾಡಬೇಕಾದ ಅನಿರ್ವಾರ್ಯತೆ ಉಂಟಾಗಿದೆ.</p>.<p>ಚಿಕ್ಕಬಳ್ಳಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಾದ ಜಕ್ಕಲಮೊಡಗು, ಗುಂಗೀರ್ಲಹಳ್ಳಿ, ದೊಡ್ಡಬಳ್ಳಾಪುರ ತಾಲ್ಲೂಕಿನ ಬಾಲೇನಹಳ್ಳಿ ಮುಂತಾದ ಗ್ರಾಮಗಳಿಂದ ದೊಡ್ಡಬಳ್ಳಾಪುರ-ಚಿಕ್ಕಬಳ್ಳಾಪುರ ಸಂಪರ್ಕ ಕಲ್ಪಿಸುವ ರಸ್ತೆ ಇದಾಗಿದೆ. ಆದರೆ ಸೇತುವೆ ಮೇಲೆ ಹೆಚ್ಚಿನ ಪ್ರಮಾಣದಲ್ಲಿ ನೀರು ಹರಿಯುತ್ತಿರುವುದರಿಂದ ಗ್ರಾಮಸ್ಥರು ನಡೆದಾಡಲು ಸಹ ಪರದಾಡುವ ಸ್ಥಿತಿ ನಿರ್ಮಾಣವಾಗಿದೆ.</p>.<p>ಈ ಭಾಗದ ಗ್ರಾಮಗಳಿಗೆ ದಿನದಲ್ಲಿ ಒಂದು ಬಾರಿ ಮಾತ್ರ ಬರುವ ಸರ್ಕಾರಿ ಬಸ್ ಸಹ ಸೇತುವೆ ಮೇಲೆ ನೀರು ಹರಿಯುತ್ತಿರುವುದರಿಂದ ಸಂಚಾರವನ್ನು ನಿಲ್ಲಿಸಿದೆ. ವಿದ್ಯಾರ್ಥಿಗಳು ಶಾಲಾ,ಕಾಲೇಜುಗಳಿಗೆ ತೆರಳಲು ಸೇತುವೆ ಮೇಲೆ ಅಪಾಯಕಾರಿ ಮಟ್ಟದಲ್ಲಿ ಹರಿಯುವ ನೀರಿನಲ್ಲೆ ನಡೆದುಕೊಂಡು ಹೋಗಬೇಕಾದ ಅನಿವಾರ್ಯತೆ ಉಂಟಾಗಿದೆ.</p>.<p>ಯಾವುದೇ ಅವಘಡ ಸಂಭವಿಸುವ ಮುನ್ನ ಎರಡೂ ತಾಲ್ಲೂಕಿನ ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿ ಸುಗಮ ಸಂಚಾರಕ್ಕೆ ಕ್ರಮಕೈಗೊಳ್ಳಬೇಕು ಎಂದು ಸ್ಥಳೀಯರು ಒತ್ತಾಯಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದೊಡ್ಡಬಳ್ಳಾಪುರ:</strong> ಒಂದು ವಾರದಿಂದಲು ಪಂಚಗಿರಿ ಶ್ರೇಣಿಯಲ್ಲಿ ಭಾರಿ ಪ್ರಮಾಣದಲ್ಲಿ ಮಳೆ ಸುರಿದ ಪರಿಣಾಮ ಜಕ್ಕಲಮೊಡಗು ಜಲಾಶಯ ತುಂಬಿ ಹರಿಯುತ್ತಿದೆ.</p>.<p>ಜಲಾಶಯದ ಹಿನ್ನೀರಿನ ಮಟ್ಟ ಹೇರಿಕೆಯಾಗಿ ಗುಂಗೀರ್ಲಹಳ್ಳಿ ಬಳಿ ಚಿಕ್ಕಬಳ್ಳಾಪುರ, ದೊಡ್ಡಬಳ್ಳಾಪುರ ಸಂಪರ್ಕ ಸೇತುವೆ ಮೇಲೆ ನೀರು ಹರಿಯುತ್ತಿವೆ. ಹೀಗಾಗಿ ಸೇತುವೆ ಮೇಲೆ ಸಂಚರಿಸುವ ವಾಹನ ಸವಾರರು ಜೀವ ಕೈಯಲ್ಲಿಡಿದು ಓಡಾಡಬೇಕಾದ ಅನಿರ್ವಾರ್ಯತೆ ಉಂಟಾಗಿದೆ.</p>.<p>ಚಿಕ್ಕಬಳ್ಳಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಾದ ಜಕ್ಕಲಮೊಡಗು, ಗುಂಗೀರ್ಲಹಳ್ಳಿ, ದೊಡ್ಡಬಳ್ಳಾಪುರ ತಾಲ್ಲೂಕಿನ ಬಾಲೇನಹಳ್ಳಿ ಮುಂತಾದ ಗ್ರಾಮಗಳಿಂದ ದೊಡ್ಡಬಳ್ಳಾಪುರ-ಚಿಕ್ಕಬಳ್ಳಾಪುರ ಸಂಪರ್ಕ ಕಲ್ಪಿಸುವ ರಸ್ತೆ ಇದಾಗಿದೆ. ಆದರೆ ಸೇತುವೆ ಮೇಲೆ ಹೆಚ್ಚಿನ ಪ್ರಮಾಣದಲ್ಲಿ ನೀರು ಹರಿಯುತ್ತಿರುವುದರಿಂದ ಗ್ರಾಮಸ್ಥರು ನಡೆದಾಡಲು ಸಹ ಪರದಾಡುವ ಸ್ಥಿತಿ ನಿರ್ಮಾಣವಾಗಿದೆ.</p>.<p>ಈ ಭಾಗದ ಗ್ರಾಮಗಳಿಗೆ ದಿನದಲ್ಲಿ ಒಂದು ಬಾರಿ ಮಾತ್ರ ಬರುವ ಸರ್ಕಾರಿ ಬಸ್ ಸಹ ಸೇತುವೆ ಮೇಲೆ ನೀರು ಹರಿಯುತ್ತಿರುವುದರಿಂದ ಸಂಚಾರವನ್ನು ನಿಲ್ಲಿಸಿದೆ. ವಿದ್ಯಾರ್ಥಿಗಳು ಶಾಲಾ,ಕಾಲೇಜುಗಳಿಗೆ ತೆರಳಲು ಸೇತುವೆ ಮೇಲೆ ಅಪಾಯಕಾರಿ ಮಟ್ಟದಲ್ಲಿ ಹರಿಯುವ ನೀರಿನಲ್ಲೆ ನಡೆದುಕೊಂಡು ಹೋಗಬೇಕಾದ ಅನಿವಾರ್ಯತೆ ಉಂಟಾಗಿದೆ.</p>.<p>ಯಾವುದೇ ಅವಘಡ ಸಂಭವಿಸುವ ಮುನ್ನ ಎರಡೂ ತಾಲ್ಲೂಕಿನ ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿ ಸುಗಮ ಸಂಚಾರಕ್ಕೆ ಕ್ರಮಕೈಗೊಳ್ಳಬೇಕು ಎಂದು ಸ್ಥಳೀಯರು ಒತ್ತಾಯಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>