ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಭಾವೈಕ್ಯ ಮಕ್ಕಳ ಮೇಳಕ್ಕೆ ಸಜ್ಜು

Last Updated 27 ಜನವರಿ 2020, 15:43 IST
ಅಕ್ಷರ ಗಾತ್ರ

ದೊಡ್ಡಬಳ್ಳಾಪುರ: ಇಲ್ಲಿನ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ಭಾರತ ಸೇವಾದಳ ಕೇಂದ್ರ ಸಮಿತಿ ವತಿಯಿಂದ ಜ.28 ರಿಂದ 30ರ ವರೆಗೆ ನಡೆಯಲಿರುವ ರಾಜ್ಯಮಟ್ಟದ ರಾಷ್ಟ್ರೀಯ ಭಾವೈಕ್ಯತಾ ಮಕ್ಕಳ ಮೇಳಕ್ಕೆ ವೇದಿಕೆ ಸಿದ್ಧಗೊಂಡಿದೆ.

ಸಂಜೆ 4.30ಕ್ಕೆ ನಡೆಯಲಿರುವ ಉದ್ಘಾಟನ ಸಮಾರಂಭಕ್ಕೆ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಸೇರಿದಂತೆ ಸಚಿವರು, ಗಣ್ಯರು ಬರಲಿದ್ದಾರೆ. ಆದ್ದರಿಂದ ಪೊಲೀಸ್ ಇಲಾಖೆ ವತಿಯಿಂದ ಸೂಕ್ತ ಬಂದೋಬಸ್ತ್ ಕೈಗೊಳ್ಳಲಾಗಿದೆ ಎಂದು ಡಿವೈಎಸ್‌ಪಿ ಟಿ.ರಂಗಪ್ಪ ತಿಳಿಸಿದ್ದಾರೆ. ಇದಕ್ಕಾಗಿ 200 ಜನ ಪೊಲೀಸ್‌ ಸಿಬ್ಬಂದಿ, ಅಗ್ನಶಾಮಕ ದಳ, ಜಿಲ್ಲಾ ಪೊಲೀಸ್‌ ಮೀಸಲುಪಡೆಯನ್ನು ಭದ್ರತೆಗೆ ಬಳಸಿಕೊಳ್ಳಲಾಗುತ್ತಿದೆ ಎಂದು ತಿಳಿಸಿದರು.

ಕ್ರೀಡಾಂಗಣದಲ್ಲಿ ಐದು ಸಾವಿರ ಜನ ವಿದ್ಯಾರ್ಥಿಗಳಿಗೆ ಪ್ರಥಮ ಆದ್ಯತೆ ನೀಡಲಾಗಿದೆ. ಕಾರ್ಯಕ್ರಮ ವೀಕ್ಷಣೆಗೆ ಸಾರ್ವಜನಿಕರು ಬರಲು ಅವಕಾಶ ಇದೆ. ಭಗತ್‌ಸಿಂಗ್‌ ಕ್ರೀಡಾಂಗಣದ ಸುತ್ತಲಿನ ಪ್ರದೇಶದಲ್ಲಿ ಎಲ್ಲ ವಾಹನಗಳ ನಿಲುಗಡೆ ನಿಷೇಧಿಸಲಾಗಿದೆ. ಸೇವಾದಳ ಕಾರ್ಯಕ್ರಮಕ್ಕೆ ರಾಜ್ಯದ ಹೊರಗಿನ ಜಿಲ್ಲೆಗಳಿಂದ ಮಕ್ಕಳನ್ನು ಕರೆತಂದಿರುವ ವಾಹನಗಳಿಗೆ ಪ್ರತ್ಯೇಕವಾಗಿ ಪಾರ್ಕಿಂಗ್‌ ಸೌಲಭ್ಯ ಕಲ್ಪಿಸಲಾಗಿದೆ ಎಂದರು.

ಗೃಹ ಸಚಿವ ಬಸವರಾಜ್ ಎಸ್.ಬೊಮ್ಮಾಯಿ, ಕಂದಾಯ ಸಚಿವ ಆರ್.ಅಶೋಕ, ಲೋಕಸಭಾ ಸದಸ್ಯ ಬಿ.ಎನ್.ಬಚ್ಚೇಗೌಡ ಭಾಗವಹಿಸಲಿದ್ದಾರೆ. ಶಾಸಕ ಟಿ.ವೆಂಕಟರಮಣಯ್ಯ ಅಧ್ಯಕ್ಷೆತೆ ವಹಿಸಲಿದ್ದಾರೆ. ಜಿಲ್ಲೆಯ ಶಾಸಕರಾದ ನಿಸರ್ಗ ನಾರಾಯಣಸ್ವಾಮಿ, ಕೆ.ಶ್ರೀನಿವಾಸ್, ಶರತ್ ಬಚ್ಚೇಗೌಡ, ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಜಯಮ್ಮ,ಉಪಾಧ್ಯಕ್ಷೆ ಕನ್ಯಾಕುಮಾರಿ ಶ್ರೀನಿವಾಸ್‌ ಭಾಗವಹಿಸಲಿದ್ದಾರೆ.

ಮಕ್ಕಳ ಮೇಳೆಕ್ಕೆ ರಾಜ್ಯದ ಪ್ರತಿ ಜಿಲ್ಲೆಯಿಂದ 150 ಮಕ್ಕಳು ಸೇರಿದಂತೆ 4500 ಮಕ್ಕಳು ಹಾಗೂ ಒಂದು ಸಾವಿರ ತರಬೇತಿದಾರರು ಭಾಗವಹಿಸಲಿದ್ದಾರೆ. ಮಕ್ಕಳಿಗೆ ಕುಡಿಯುವ ನೀರು, ಊಟದ ವ್ಯವಸ್ಥೆಯೊಂದಿಗೆ, ಉಳಿದುಕೊಳ್ಳಲು ಅಗತ್ಯ ವ್ಯವಸ್ಥೆ ಕಲ್ಪಿಸಲಾಗಿದೆ. ಹೆಚ್ಚುವರಿ ಸಂಚಾರಿ ಆಸ್ಪತ್ರೆ, ಶೌಚಾಲಯಗಳ ವ್ಯವಸ್ಥೆ ಮಾಡಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT