ಕಾಲುವೆಯಲ್ಲಿ ನೀರು ನಿಲ್ಲುತ್ತಿದೆ. ಜೊತೆಗೆ ಕಸ, ಕಡ್ಡಿ ಇನ್ನಿತರ ತ್ಯಾಜ್ಯ ನೀರಿನಲ್ಲಿ ಸೇರಿರುವುದರಿಂದ ಕಾಲುವೆಯ ಅಕ್ಕಪಕ್ಕದ ನಿವಾಸಿಗಳಿಗೆ ದುರ್ನಾತ ಬೀರುತ್ತಿದೆ. ರಾಜಕಾಲುವೆ ಸೊಳ್ಳೆಗಳ ಉತ್ಪತ್ತಿ ತಾಣವಾಗಿದೆ. ಸಂಜೆಯಾಗುತ್ತಿದ್ದಂತೆ ಸೊಳ್ಳೆ ಕಾಟದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲದಂತಾಗಿದೆ. ಮನೆ ಬಾಗಿಲು ಸದಾ ಮುಚ್ಚಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ.