<p><strong>ಸೂಲಿಬೆಲೆ: </strong>ಪಟ್ಟಣದ ಒಂದನೇ ವಾರ್ಡ್ನಲ್ಲಿ ಹಾದು ಹೋಗುವ ರಾಜಕಾಲುವೆಯಲ್ಲಿ ನೀರು ನಿಂತು ದುರ್ನಾತ ಬೀರುತ್ತಿದೆ. ಸಂಬಂಧಪಟ್ಟ ಅಧಿಕಾರಿಗಳು ಕಾಲುವೆಯಲ್ಲಿ ನೀರು ನಿಲ್ಲದಂತೆ ದುರಸ್ತಿಗೊಳಿಸಲು ಮುಂದಾಗಬೇಕು ಎಂದು ಸ್ಥಳೀಯ ನಿವಾಸಿಗಳು ಆಗ್ರಹಿಸಿದ್ದಾರೆ.</p>.<p>ಕಾಲುವೆಯಲ್ಲಿ ನೀರು ನಿಲ್ಲುತ್ತಿದೆ. ಜೊತೆಗೆ ಕಸ, ಕಡ್ಡಿ ಇನ್ನಿತರ ತ್ಯಾಜ್ಯ ನೀರಿನಲ್ಲಿ ಸೇರಿರುವುದರಿಂದ ಕಾಲುವೆಯ ಅಕ್ಕಪಕ್ಕದ ನಿವಾಸಿಗಳಿಗೆ ದುರ್ನಾತ ಬೀರುತ್ತಿದೆ. ರಾಜಕಾಲುವೆ ಸೊಳ್ಳೆಗಳ ಉತ್ಪತ್ತಿ ತಾಣವಾಗಿದೆ. ಸಂಜೆಯಾಗುತ್ತಿದ್ದಂತೆ ಸೊಳ್ಳೆ ಕಾಟದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲದಂತಾಗಿದೆ. ಮನೆ ಬಾಗಿಲು ಸದಾ ಮುಚ್ಚಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ.</p>.<p>ಇತ್ತೀಚೆಗೆ ಸೂಲಿಬೆಲೆ ಗ್ರಾಮ ಪಂಚಾಯಿತಿಯ ಒಂದನೇ ವಾರ್ಡ್ನಲ್ಲಿ ಗ್ರಾಮ ನೈರ್ಮಲ್ಯ ಮತ್ತು ಚರಂಡಿ ಸ್ವಚ್ಛತೆ ಕಾಮಗಾರಿಗೆ ₹ 40 ಸಾವಿರ ಖರ್ಚು ಮಾಡಲಾಗಿದೆ. ಆದರೆ, ಸರಿಯಾದ ರೀತಿಯಲ್ಲಿ ಚರಂಡಿ ಸ್ವಚ್ಛತೆ ಮಾಡದ ಕಾರಣದಿಂದ ರಾಜಕಾಲುವೆಯಲ್ಲಿ ಹಳ್ಳ ನಿರ್ಮಾಣವಾಗಿದೆ. ಇದರ ಪರಿಣಾಮ ಕಾಲುವೆಯಲ್ಲಿ ನೀರು ಸರಾಗವಾಗಿ ಹರಿಯದೆ ಹಳ್ಳದಲ್ಲಿ ನಿಲ್ಲುತ್ತಿದೆ .</p>.<p>‘ರಾಜಕಾಲುವೆಯಲ್ಲಿ ನೀರು ಹರಿಯ ದಿರುವ ಬಗ್ಗೆ ಗಮನಕ್ಕೆ ಬಂದಿಲ್ಲ. ಸ್ಥಳಕ್ಕೆ ಭೇಟಿ ನೀಡಿ ಕ್ರಮಕೈಗೊಳ್ಳಲಾಗುವುದು’ ಎಂದು ಪಿಡಿಒಸುಂದರ್ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸೂಲಿಬೆಲೆ: </strong>ಪಟ್ಟಣದ ಒಂದನೇ ವಾರ್ಡ್ನಲ್ಲಿ ಹಾದು ಹೋಗುವ ರಾಜಕಾಲುವೆಯಲ್ಲಿ ನೀರು ನಿಂತು ದುರ್ನಾತ ಬೀರುತ್ತಿದೆ. ಸಂಬಂಧಪಟ್ಟ ಅಧಿಕಾರಿಗಳು ಕಾಲುವೆಯಲ್ಲಿ ನೀರು ನಿಲ್ಲದಂತೆ ದುರಸ್ತಿಗೊಳಿಸಲು ಮುಂದಾಗಬೇಕು ಎಂದು ಸ್ಥಳೀಯ ನಿವಾಸಿಗಳು ಆಗ್ರಹಿಸಿದ್ದಾರೆ.</p>.<p>ಕಾಲುವೆಯಲ್ಲಿ ನೀರು ನಿಲ್ಲುತ್ತಿದೆ. ಜೊತೆಗೆ ಕಸ, ಕಡ್ಡಿ ಇನ್ನಿತರ ತ್ಯಾಜ್ಯ ನೀರಿನಲ್ಲಿ ಸೇರಿರುವುದರಿಂದ ಕಾಲುವೆಯ ಅಕ್ಕಪಕ್ಕದ ನಿವಾಸಿಗಳಿಗೆ ದುರ್ನಾತ ಬೀರುತ್ತಿದೆ. ರಾಜಕಾಲುವೆ ಸೊಳ್ಳೆಗಳ ಉತ್ಪತ್ತಿ ತಾಣವಾಗಿದೆ. ಸಂಜೆಯಾಗುತ್ತಿದ್ದಂತೆ ಸೊಳ್ಳೆ ಕಾಟದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲದಂತಾಗಿದೆ. ಮನೆ ಬಾಗಿಲು ಸದಾ ಮುಚ್ಚಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ.</p>.<p>ಇತ್ತೀಚೆಗೆ ಸೂಲಿಬೆಲೆ ಗ್ರಾಮ ಪಂಚಾಯಿತಿಯ ಒಂದನೇ ವಾರ್ಡ್ನಲ್ಲಿ ಗ್ರಾಮ ನೈರ್ಮಲ್ಯ ಮತ್ತು ಚರಂಡಿ ಸ್ವಚ್ಛತೆ ಕಾಮಗಾರಿಗೆ ₹ 40 ಸಾವಿರ ಖರ್ಚು ಮಾಡಲಾಗಿದೆ. ಆದರೆ, ಸರಿಯಾದ ರೀತಿಯಲ್ಲಿ ಚರಂಡಿ ಸ್ವಚ್ಛತೆ ಮಾಡದ ಕಾರಣದಿಂದ ರಾಜಕಾಲುವೆಯಲ್ಲಿ ಹಳ್ಳ ನಿರ್ಮಾಣವಾಗಿದೆ. ಇದರ ಪರಿಣಾಮ ಕಾಲುವೆಯಲ್ಲಿ ನೀರು ಸರಾಗವಾಗಿ ಹರಿಯದೆ ಹಳ್ಳದಲ್ಲಿ ನಿಲ್ಲುತ್ತಿದೆ .</p>.<p>‘ರಾಜಕಾಲುವೆಯಲ್ಲಿ ನೀರು ಹರಿಯ ದಿರುವ ಬಗ್ಗೆ ಗಮನಕ್ಕೆ ಬಂದಿಲ್ಲ. ಸ್ಥಳಕ್ಕೆ ಭೇಟಿ ನೀಡಿ ಕ್ರಮಕೈಗೊಳ್ಳಲಾಗುವುದು’ ಎಂದು ಪಿಡಿಒಸುಂದರ್ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>