<p><strong>ವಿಜಯಪುರ (ದೇವನಹಳ್ಳಿ): </strong>ಇಲ್ಲಿನ ಪುರಸಭಾ ಆವರಣದಲ್ಲಿ ಮಂಗಳವಾರ ಪೌರಕಾರ್ಮಿಕರ ದಿನಾಚರಣೆ ಆಚರಿಸಲಾಯಿತು.</p>.<p>ಪುರಸಭೆ ಅಧ್ಯಕ್ಷೆ ಭವ್ಯಾ ಮಹೇಶ್ ಮಾತನಾಡಿ, ಪೌರಕಾರ್ಮಿಕರು ತಮ್ಮ ಮಕ್ಕಳಿಗೆ ಉತ್ತಮ ವಿದ್ಯಾಭ್ಯಾಸ ಒದಗಿಸಿ ಉನ್ನತ ಹುದ್ದೆಗಳಿಗೆ ಸೇರಲು ಪ್ರೋತ್ಸಾಹಿಸಬೇಕು. ಪೌರ ಕಾರ್ಮಿಕರನ್ನು ಪ್ರತಿವರ್ಷ ಗೌರವಿಸುವುದು ಜನಮೆಚ್ಚುವ ಕಾರ್ಯವಾಗಿದೆ ಎಂದು ಹೇಳಿದರು.</p>.<p>ಪುರಸಭೆ ಮುಖ್ಯಾಧಿಕಾರಿ ಸತ್ಯನಾರಾಯಣ್ ಮಾತನಾಡಿ, ದೇಶ ಕಾಯುವ ಸೈನಿಕರಂತೆ ಪೌರ ಕಾರ್ಮಿಕರು ಸಾರ್ವಜನಿಕರ ಆರೋಗ್ಯ ರಕ್ಷಣೆ ಮಾಡುವ ವೈದ್ಯರಂತೆ. ನಿತ್ಯ ಪಟ್ಟಣದ ಸ್ವಚ್ಛತೆಗಾಗಿ ಶ್ರಮಿಸುತ್ತಿರುವ ಪೌರಕಾರ್ಮಿಕರನ್ನು ಗೌರವಿಸುವುದು ಪ್ರತಿಯೊಬ್ಬರ ಕರ್ತವ್ಯ ಎಂದರು.</p>.<p>ಸಾರ್ವಜನಿಕರು ನಿಷೇಧಿತ ಪ್ಲಾಸ್ಟಿಕ್ ಬಳಕೆ ಮಾಡಬಾರದು. ಸಾರ್ವಜನಿಕರು ಮನೆಯಲ್ಲಿಯೇ ಒಣ ಕಸ, ಹಸಿ ಕಸವನ್ನು ವಿಂಗಡಿಸಿ ಮನೆ ಮುಂದೆ ಬರುವ ಪುರಸಭೆ ವಾಹನಕ್ಕೆ ನೀಡಬೇಕು. ಪರಿಸರ ಸ್ವಚ್ಛತೆಗೆ ಆದ್ಯತೆ ನೀಡಬೇಕು ಎಂದರು.</p>.<p>ನೀರು ಸರಬರಾಜು ನಿವೃತ್ತ ಸಿಬ್ಬಂದಿ ಮುತ್ಯಾಲಪ್ಪ, ಶಿವಕುಮಾರ್, ಕ್ರೀಡಾ ಸ್ಪರ್ಧೆಯಲ್ಲಿ ವಿಜೇತರಾದ ಪೌರಕಾರ್ಮಿಕರಿಗೆ ಬಹುಮಾನ ವಿತರಿಸಲಾಯಿತು. ಬೆಂಗಳೂರು ರತ್ನ ಪ್ರಶಸ್ತಿ ಪುರಸ್ಕೃತ ಅಂಬರೀಶ್ ಹಾಗೂ ಸಂದ್ಯಾ ದಂಪತಿಯನ್ನು ಸನ್ಮಾನಿಸಲಾಯಿತು.</p>.<p>ಪುರಸಭಾ ಉಪಾಧ್ಯಕ್ಷೆ ತಾಜ್ ವುನ್ನೀಸಾ, ಸ್ಥಾಯಿ ಸಮಿತಿ ಮಾಜಿ ಅಧ್ಯಕ್ಷ ಸಿ.ನಾರಾಯಣಸ್ವಾಮಿ, ಸದಸ್ಯ ಬೈರೇಗೌಡ, ನಂದಕುಮಾರ್, ಕವಿತಾ, ಶಿಲ್ಪ ಅಜಿತ್, ಆಯಿಷಾ ಸೈಫುಲ್ಲಾ, ಪೌರ ಕಾರ್ಮಿಕರ ನೌಕರ ಸಂಘದ ಅಧ್ಯಕ್ಷ ಕೃಷ್ಣ, ಉಪಾಧ್ಯಕ್ಷ ಲಕ್ಷ್ಮಣ್, ಪುರಸಭಾ ಸಿಬ್ಬಂದಿ ಹಾಗೂ ಪೌರಕಾರ್ಮಿಕರು ಹಾಜರಿದ್ದರು.</p>.<p>ಬಹುತೇಕ ಪುರಸಭಾ ಸದಸ್ಯರು ಗೈರು ಪುರಸಭೆಯಿಂದ ನಡೆಯುವ ಬಹುತೇಕ ಜಯಂತಿ ಕಾರ್ಯಕ್ರಮಗಳಿಗೆ ಪುರಸಭಾ ಚುನಾಯಿತ ಸದಸ್ಯರು ಗೈರಾಗುತ್ತಿದ್ದು ಮಂಗಳವಾರ ನಡೆದ ಪೌರಕಾರ್ಮಿಕರ ದಿನಾಚರಣೆಯಲ್ಲಿಯೂ ಬಹುತೇಕ ಚುನಾಯಿತ ಸದಸ್ಯರು ಕಾರ್ಯಕ್ರಮಕ್ಕೆ ಆಗಮಿಸದ ಕಾರಣ ಸಾರ್ವಜನಿಕರಿಂದ ಆಕ್ಷೇಪ ವ್ಯಕ್ತವಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಿಜಯಪುರ (ದೇವನಹಳ್ಳಿ): </strong>ಇಲ್ಲಿನ ಪುರಸಭಾ ಆವರಣದಲ್ಲಿ ಮಂಗಳವಾರ ಪೌರಕಾರ್ಮಿಕರ ದಿನಾಚರಣೆ ಆಚರಿಸಲಾಯಿತು.</p>.<p>ಪುರಸಭೆ ಅಧ್ಯಕ್ಷೆ ಭವ್ಯಾ ಮಹೇಶ್ ಮಾತನಾಡಿ, ಪೌರಕಾರ್ಮಿಕರು ತಮ್ಮ ಮಕ್ಕಳಿಗೆ ಉತ್ತಮ ವಿದ್ಯಾಭ್ಯಾಸ ಒದಗಿಸಿ ಉನ್ನತ ಹುದ್ದೆಗಳಿಗೆ ಸೇರಲು ಪ್ರೋತ್ಸಾಹಿಸಬೇಕು. ಪೌರ ಕಾರ್ಮಿಕರನ್ನು ಪ್ರತಿವರ್ಷ ಗೌರವಿಸುವುದು ಜನಮೆಚ್ಚುವ ಕಾರ್ಯವಾಗಿದೆ ಎಂದು ಹೇಳಿದರು.</p>.<p>ಪುರಸಭೆ ಮುಖ್ಯಾಧಿಕಾರಿ ಸತ್ಯನಾರಾಯಣ್ ಮಾತನಾಡಿ, ದೇಶ ಕಾಯುವ ಸೈನಿಕರಂತೆ ಪೌರ ಕಾರ್ಮಿಕರು ಸಾರ್ವಜನಿಕರ ಆರೋಗ್ಯ ರಕ್ಷಣೆ ಮಾಡುವ ವೈದ್ಯರಂತೆ. ನಿತ್ಯ ಪಟ್ಟಣದ ಸ್ವಚ್ಛತೆಗಾಗಿ ಶ್ರಮಿಸುತ್ತಿರುವ ಪೌರಕಾರ್ಮಿಕರನ್ನು ಗೌರವಿಸುವುದು ಪ್ರತಿಯೊಬ್ಬರ ಕರ್ತವ್ಯ ಎಂದರು.</p>.<p>ಸಾರ್ವಜನಿಕರು ನಿಷೇಧಿತ ಪ್ಲಾಸ್ಟಿಕ್ ಬಳಕೆ ಮಾಡಬಾರದು. ಸಾರ್ವಜನಿಕರು ಮನೆಯಲ್ಲಿಯೇ ಒಣ ಕಸ, ಹಸಿ ಕಸವನ್ನು ವಿಂಗಡಿಸಿ ಮನೆ ಮುಂದೆ ಬರುವ ಪುರಸಭೆ ವಾಹನಕ್ಕೆ ನೀಡಬೇಕು. ಪರಿಸರ ಸ್ವಚ್ಛತೆಗೆ ಆದ್ಯತೆ ನೀಡಬೇಕು ಎಂದರು.</p>.<p>ನೀರು ಸರಬರಾಜು ನಿವೃತ್ತ ಸಿಬ್ಬಂದಿ ಮುತ್ಯಾಲಪ್ಪ, ಶಿವಕುಮಾರ್, ಕ್ರೀಡಾ ಸ್ಪರ್ಧೆಯಲ್ಲಿ ವಿಜೇತರಾದ ಪೌರಕಾರ್ಮಿಕರಿಗೆ ಬಹುಮಾನ ವಿತರಿಸಲಾಯಿತು. ಬೆಂಗಳೂರು ರತ್ನ ಪ್ರಶಸ್ತಿ ಪುರಸ್ಕೃತ ಅಂಬರೀಶ್ ಹಾಗೂ ಸಂದ್ಯಾ ದಂಪತಿಯನ್ನು ಸನ್ಮಾನಿಸಲಾಯಿತು.</p>.<p>ಪುರಸಭಾ ಉಪಾಧ್ಯಕ್ಷೆ ತಾಜ್ ವುನ್ನೀಸಾ, ಸ್ಥಾಯಿ ಸಮಿತಿ ಮಾಜಿ ಅಧ್ಯಕ್ಷ ಸಿ.ನಾರಾಯಣಸ್ವಾಮಿ, ಸದಸ್ಯ ಬೈರೇಗೌಡ, ನಂದಕುಮಾರ್, ಕವಿತಾ, ಶಿಲ್ಪ ಅಜಿತ್, ಆಯಿಷಾ ಸೈಫುಲ್ಲಾ, ಪೌರ ಕಾರ್ಮಿಕರ ನೌಕರ ಸಂಘದ ಅಧ್ಯಕ್ಷ ಕೃಷ್ಣ, ಉಪಾಧ್ಯಕ್ಷ ಲಕ್ಷ್ಮಣ್, ಪುರಸಭಾ ಸಿಬ್ಬಂದಿ ಹಾಗೂ ಪೌರಕಾರ್ಮಿಕರು ಹಾಜರಿದ್ದರು.</p>.<p>ಬಹುತೇಕ ಪುರಸಭಾ ಸದಸ್ಯರು ಗೈರು ಪುರಸಭೆಯಿಂದ ನಡೆಯುವ ಬಹುತೇಕ ಜಯಂತಿ ಕಾರ್ಯಕ್ರಮಗಳಿಗೆ ಪುರಸಭಾ ಚುನಾಯಿತ ಸದಸ್ಯರು ಗೈರಾಗುತ್ತಿದ್ದು ಮಂಗಳವಾರ ನಡೆದ ಪೌರಕಾರ್ಮಿಕರ ದಿನಾಚರಣೆಯಲ್ಲಿಯೂ ಬಹುತೇಕ ಚುನಾಯಿತ ಸದಸ್ಯರು ಕಾರ್ಯಕ್ರಮಕ್ಕೆ ಆಗಮಿಸದ ಕಾರಣ ಸಾರ್ವಜನಿಕರಿಂದ ಆಕ್ಷೇಪ ವ್ಯಕ್ತವಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>