ದೇವನಹಳ್ಳಿ: ‘ಪರಿಸರ ಸ್ವಚ್ಛತೆ ಎಂಬುದು ಗಾಂಧಿ ಜಯಂತಿಗೆ ಸೀಮಿತವಾಗಬಾರದು’ ಎಂದು ಜಿಲ್ಲಾ ಪಂಚಾಯಿತಿಯ ಸಹಾಯಕ ಯೋಜನಾ ಅಧಿಕಾರಿ ಗೋವಿಂದರಾಜು ಹೇಳಿದರು.
ನಗರದ ಸರ್ಕಾರಿ ಪ್ರಾಥಮಿಕ ಶಾಲಾ ಆವರಣ ಮತ್ತು ಅಂಗನವಾಡಿ ಕೇಂದ್ರದ ಸುತ್ತ ಸ್ವಚ್ಛತಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಮಾನಸಿಕ ಸದೃಢತೆ, ಉತ್ತಮ ಆರೋಗ್ಯ ಕಾಯ್ದುಕೊಳ್ಳಲು ಯೋಗ ಅಗತ್ಯ. ನಾವು ವಾಸಿಸುವ ಪರಿಸರ, ಶುದ್ಧ ಕುಡಿಯುವ ನೀರು, ಆಹಾರ ಪದ್ಧತಿ ಬಗ್ಗೆಯೂ ಎಚ್ಚರಿಕೆವಹಿಸಬೇಕಿದೆ. ದೇಶದ ಅಭಿವೃದ್ಧಿಯಲ್ಲಿ ಆರೋಗ್ಯಯುತ ಸಮಾಜ ಮುಖ್ಯ ಪಾತ್ರ ವಹಿಸುತ್ತದೆ ಎಂದರು.