ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಅನಧಿಕೃತ ಅಂಗಡಿ ತೆರವುಗೊಳಿಸಿ’

Last Updated 4 ಫೆಬ್ರುವರಿ 2021, 7:45 IST
ಅಕ್ಷರ ಗಾತ್ರ

ವಿಜಯಪುರ: ಪಟ್ಟಣದ ಚಿಕ್ಕಬಳ್ಳಾಪುರ ಮುಖ್ಯರಸ್ತೆಯ ಇಕ್ಕೆಲಗಳಲ್ಲಿ ಅನಧಿಕೃತವಾಗಿ ಪೆಟ್ಟಿಗೆ ಅಂಗಡಿಗಳನ್ನು ಇಟ್ಟುಕೊಂಡಿದ್ದು, ಬೆಸ್ಕಾಂ ಅಕ್ರಮವಾಗಿ ವಿದ್ಯುತ್ ಸಂಪರ್ಕ ನೀಡಿದೆ. ಇವುಗಳ ತೆರವಿಗೆ ಪುರಸಭೆ ಆಡಳಿತ ಕ್ರಮಕೈಗೊಳ್ಳಬೇಕು ಎಂದು ಕರ್ನಾಟಕ ರಕ್ಷಣಾ ವೇದಿಕೆ (ಶಿವರಾಮೇಗೌಡರ ಬಣ)ಯ ಕಾರ್ಯಕರ್ತರು ಮುಖ್ಯಾಧಿಕಾರಿಗೆ ಮನವಿ ಪತ್ರ ಸಲ್ಲಿಸಿದರು.

ಕರವೇ ಜಿಲ್ಲಾ ಮುಖಂಡ ಅಣ್ಣಮ್ಮತಾಯಿ ಸುರೇಶ್ ಮಾತನಾಡಿ, ಈ ಬಗ್ಗೆ ಬೆಸ್ಕಾಂ ಇಲಾಖೆ ಪ್ರಶ್ನಿಸಿದರೆ ಅವರು ಪುರಸಭೆ ಅಧಿಕಾರಿಗಳ ಮೇಲೆ ಹೇಳುತ್ತಿದ್ದಾರೆ. ಪುರಸಭೆಯವರು ಲೋಕೋಪಯೋಗಿ ಇಲಾಖೆಯ ಮೇಲೆ ಹೇಳುತ್ತಿದ್ದಾರೆ. ಈ ಗೊಂದಲದ ವಾತಾವರಣದಿಂದಾಗಿ ಸಮಸ್ಯೆ ಹೆಚ್ಚಾಗುತ್ತಿದ್ದು, ಸಂಬಂಧಪಟ್ಟ ಅಧಿಕಾರಿಗಳು ಗಮನಹರಿಸಬೇಕು ಎಂದು
ಒತ್ತಾಯಿಸಿದರು.

ಸಮರಸೇನೆ ತಾಲ್ಲೂಕು ಘಟಕದ ಅಧ್ಯಕ್ಷ ಮಹೇಶ್ ಚತ್ರಪತಿ, ನರಸಿಂಹಣ್ಣ, ಮಂಜುನಾಥ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT