ರಾಜ್ಕುಮಾರ್ ಅಭಿಮಾನಿಗಳ ಸಂಘದ ರಾಜ್ಯ ಅಧ್ಯಕ್ಷ ಸಾ.ರ ಗೋವಿಂದು ಮಾತನಾಡಿ, ಈಚೆಗೆ ಮಹಾರಾಷ್ಟ ಮುಖ್ಯಮಂತ್ರಿ ನೀಡಿದ್ದ ಹೇಳಿಕೆಗೆ ವಿರೋಧಿಸುವ ರಾಜಕಾರಣಿಗಳು, ಮರಾಠ ಅಭಿವೃದ್ಧಿ ನಿಗಮ ಹಾಗೂ ಎಂ.ಇ.ಎಸ್ ನಿಷೇಧಕ್ಕೆ ಏಕೆ ಒತ್ತಾಯಿಸುವುದಿಲ್ಲ. ಹಿಂದಿ ರಾಷ್ಟ್ರ ಭಾಷೆ, ಅದರ ನಿರ್ಲಕ್ಷ್ಯ ಬೇಡ ಎಂದು ಹೇಳಿರುವ ಸಾಹಿತಿ ದೊಡ್ಡರಂಗೇಗೌಡ ಅವರ ಹೇಳಿಕೆ ಖಂಡನೀಯ. ಈ ಹೇಳಿಕೆಗೆ ಅವರು ಹಿಂಪಡೆಯಬೇಕು ಇಲ್ಲವೇ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಸ್ಥಾನ ಬಿಡಬೇಕು. ರಾಜ್ಯ ಸರ್ಕಾರ ಹೋರಾಟ ಹತ್ತಿಕ್ಕಿ ಹಿಟ್ಲರ್ ಸಂಸ್ಕೃತಿ ಮೆರೆಯುತ್ತಿದ್ದು, ಹೋರಾಟಗಾರರು ಇದಕ್ಕೆ ಹೆದರಬಾರದು ಎಂದು ಹೇಳಿದರು.