<p><strong>ತಿಪ್ಪಸಂದ್ರ(ಮಾಗಡಿ): </strong>ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಿ ತಿಮ್ಮೇಗೌಡ, ಉಪಾಧ್ಯಕ್ಷರಾಗಿ ಜಯಮ್ಮ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ ಪ್ರಸನ್ನಕುಮಾರಿ ತಿಳಿಸಿದರು.</p>.<p>ನೂತನ ಅಧ್ಯಕ್ಷ ತಿಮ್ಮೇಗೌಡ ಮಾತನಾಡಿ, ಸಹಕಾರ ಸಂಘಗಳು ಸರ್ವರ ಸಹಕಾರದಿಂದ ಮಾತ್ರ ಯಶಸ್ವಿಯಾಗಿವೆ. ಷೇರುದಾರರ ಸಹಕಾರದೊಂದಿಗೆ ಅಧಿಕಾರ ನಡೆಸಿಕೊಂಡು ಹೋಗಬೇಕಾಗಿದೆ. ರೈತರಿಗೆ ಅನುಕೂಲಕರವಾದ ಸವಲತ್ತು ನೀಡಲು ಶ್ರಮಿಸುವುದಾಗಿ ತಿಳಿಸಿದರು.</p>.<p>ತಾಲ್ಲೂಕು ಪಂಚಾಯಿತಿ ಸದಸ್ಯ ಕೆ.ಎಚ್.ಶಿವರಾಜು ಮಾತನಾಡಿ, ಕಾಂಗ್ರೆಸ್ ಮುಖಂಡ ಎಚ್.ಸಿ.ಬಾಲಕೃಷ್ಣ ಅವರ ಸಲಹೆಯಂತೆ ರೈತರಿಗೆ ಅನುಕೂಲ ಕಲ್ಪಿಸಲಾಗುವುದು ಎಂದರು.</p>.<p>ಸಹಕಾರ ಸಂಘದ ನಿರ್ದೇಶಕರಾದ ಟಿ.ಜಿ.ವೆಂಕಟೇಶ್, ಟಿ.ಎಚ್.ಚಂದ್ರಶೇಖರ್, ಶಂಕರ್, ಜಯಮ್ಮ, ನರಸಮ್ಮ, ಟಿ.ವಿ.ವೆಂಕಟೇಶ್, ನೂತನ ಅಧ್ಯಕ್ಷರನ್ನು ಅಭಿನಂದಿಸಿದರು.</p>.<p>ಮುಖಂಡರಾದ ಶ್ರೀನಿವಾಸ್, ಗಂಗಣ್ಣ, ರಮೇಶ್, ರಂಗಸ್ವಾಮಯ್ಯ, ಮರಿಯಣ್ಣ, ರಾಜಣ್ಣ, ಶಿವಣ್ಣ, ಚಿಕ್ಕರಾಜು, ಜಯಣ್ಣ, ತಮ್ಮಯ್ಯ, ರಂಗಸ್ವಾಮಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತಿಪ್ಪಸಂದ್ರ(ಮಾಗಡಿ): </strong>ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಿ ತಿಮ್ಮೇಗೌಡ, ಉಪಾಧ್ಯಕ್ಷರಾಗಿ ಜಯಮ್ಮ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ ಪ್ರಸನ್ನಕುಮಾರಿ ತಿಳಿಸಿದರು.</p>.<p>ನೂತನ ಅಧ್ಯಕ್ಷ ತಿಮ್ಮೇಗೌಡ ಮಾತನಾಡಿ, ಸಹಕಾರ ಸಂಘಗಳು ಸರ್ವರ ಸಹಕಾರದಿಂದ ಮಾತ್ರ ಯಶಸ್ವಿಯಾಗಿವೆ. ಷೇರುದಾರರ ಸಹಕಾರದೊಂದಿಗೆ ಅಧಿಕಾರ ನಡೆಸಿಕೊಂಡು ಹೋಗಬೇಕಾಗಿದೆ. ರೈತರಿಗೆ ಅನುಕೂಲಕರವಾದ ಸವಲತ್ತು ನೀಡಲು ಶ್ರಮಿಸುವುದಾಗಿ ತಿಳಿಸಿದರು.</p>.<p>ತಾಲ್ಲೂಕು ಪಂಚಾಯಿತಿ ಸದಸ್ಯ ಕೆ.ಎಚ್.ಶಿವರಾಜು ಮಾತನಾಡಿ, ಕಾಂಗ್ರೆಸ್ ಮುಖಂಡ ಎಚ್.ಸಿ.ಬಾಲಕೃಷ್ಣ ಅವರ ಸಲಹೆಯಂತೆ ರೈತರಿಗೆ ಅನುಕೂಲ ಕಲ್ಪಿಸಲಾಗುವುದು ಎಂದರು.</p>.<p>ಸಹಕಾರ ಸಂಘದ ನಿರ್ದೇಶಕರಾದ ಟಿ.ಜಿ.ವೆಂಕಟೇಶ್, ಟಿ.ಎಚ್.ಚಂದ್ರಶೇಖರ್, ಶಂಕರ್, ಜಯಮ್ಮ, ನರಸಮ್ಮ, ಟಿ.ವಿ.ವೆಂಕಟೇಶ್, ನೂತನ ಅಧ್ಯಕ್ಷರನ್ನು ಅಭಿನಂದಿಸಿದರು.</p>.<p>ಮುಖಂಡರಾದ ಶ್ರೀನಿವಾಸ್, ಗಂಗಣ್ಣ, ರಮೇಶ್, ರಂಗಸ್ವಾಮಯ್ಯ, ಮರಿಯಣ್ಣ, ರಾಜಣ್ಣ, ಶಿವಣ್ಣ, ಚಿಕ್ಕರಾಜು, ಜಯಣ್ಣ, ತಮ್ಮಯ್ಯ, ರಂಗಸ್ವಾಮಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>