ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತಿಪ್ಪಸಂದ್ರ ಕೃಷಿ ಸಂಘಕ್ಕೆ ಅವಿರೋಧ ಆಯ್ಕೆ

Last Updated 6 ಫೆಬ್ರುವರಿ 2020, 14:16 IST
ಅಕ್ಷರ ಗಾತ್ರ

ತಿಪ್ಪಸಂದ್ರ(ಮಾಗಡಿ): ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಿ ತಿಮ್ಮೇಗೌಡ, ಉಪಾಧ್ಯಕ್ಷರಾಗಿ ಜಯಮ್ಮ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ ಪ್ರಸನ್ನಕುಮಾರಿ ತಿಳಿಸಿದರು.

ನೂತನ ಅಧ್ಯಕ್ಷ ತಿಮ್ಮೇಗೌಡ ಮಾತನಾಡಿ, ಸಹಕಾರ ಸಂಘಗಳು ಸರ್ವರ ಸಹಕಾರದಿಂದ ಮಾತ್ರ ಯಶಸ್ವಿಯಾಗಿವೆ. ಷೇರುದಾರರ ಸಹಕಾರದೊಂದಿಗೆ ಅಧಿಕಾರ ನಡೆಸಿಕೊಂಡು ಹೋಗಬೇಕಾಗಿದೆ. ರೈತರಿಗೆ ಅನುಕೂಲಕರವಾದ ಸವಲತ್ತು ನೀಡಲು ಶ್ರಮಿಸುವುದಾಗಿ ತಿಳಿಸಿದರು.

ತಾಲ್ಲೂಕು ಪಂಚಾಯಿತಿ ಸದಸ್ಯ ಕೆ.ಎಚ್‌.ಶಿವರಾಜು ಮಾತನಾಡಿ, ಕಾಂಗ್ರೆಸ್‌ ಮುಖಂಡ ಎಚ್‌.ಸಿ.ಬಾಲಕೃಷ್ಣ ಅವರ ಸಲಹೆಯಂತೆ ರೈತರಿಗೆ ಅನುಕೂಲ ಕಲ್ಪಿಸಲಾಗುವುದು ಎಂದರು.

ಸಹಕಾರ ಸಂಘದ ನಿರ್ದೇಶಕರಾದ ಟಿ.ಜಿ.ವೆಂಕಟೇಶ್, ಟಿ.ಎಚ್‌.ಚಂದ್ರಶೇಖರ್‌, ಶಂಕರ್‌, ಜಯಮ್ಮ, ನರಸಮ್ಮ, ಟಿ.ವಿ.ವೆಂಕಟೇಶ್‌, ನೂತನ ಅಧ್ಯಕ್ಷರನ್ನು ಅಭಿನಂದಿಸಿದರು.

ಮುಖಂಡರಾದ ಶ್ರೀನಿವಾಸ್‌, ಗಂಗಣ್ಣ, ರಮೇಶ್‌, ರಂಗಸ್ವಾಮಯ್ಯ, ಮರಿಯಣ್ಣ, ರಾಜಣ್ಣ, ಶಿವಣ್ಣ, ಚಿಕ್ಕರಾಜು, ಜಯಣ್ಣ, ತಮ್ಮಯ್ಯ, ರಂಗಸ್ವಾಮಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT