ತಿಪ್ಪಸಂದ್ರ(ಮಾಗಡಿ): ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಿ ತಿಮ್ಮೇಗೌಡ, ಉಪಾಧ್ಯಕ್ಷರಾಗಿ ಜಯಮ್ಮ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ ಪ್ರಸನ್ನಕುಮಾರಿ ತಿಳಿಸಿದರು.
ನೂತನ ಅಧ್ಯಕ್ಷ ತಿಮ್ಮೇಗೌಡ ಮಾತನಾಡಿ, ಸಹಕಾರ ಸಂಘಗಳು ಸರ್ವರ ಸಹಕಾರದಿಂದ ಮಾತ್ರ ಯಶಸ್ವಿಯಾಗಿವೆ. ಷೇರುದಾರರ ಸಹಕಾರದೊಂದಿಗೆ ಅಧಿಕಾರ ನಡೆಸಿಕೊಂಡು ಹೋಗಬೇಕಾಗಿದೆ. ರೈತರಿಗೆ ಅನುಕೂಲಕರವಾದ ಸವಲತ್ತು ನೀಡಲು ಶ್ರಮಿಸುವುದಾಗಿ ತಿಳಿಸಿದರು.
ತಾಲ್ಲೂಕು ಪಂಚಾಯಿತಿ ಸದಸ್ಯ ಕೆ.ಎಚ್.ಶಿವರಾಜು ಮಾತನಾಡಿ, ಕಾಂಗ್ರೆಸ್ ಮುಖಂಡ ಎಚ್.ಸಿ.ಬಾಲಕೃಷ್ಣ ಅವರ ಸಲಹೆಯಂತೆ ರೈತರಿಗೆ ಅನುಕೂಲ ಕಲ್ಪಿಸಲಾಗುವುದು ಎಂದರು.
ಸಹಕಾರ ಸಂಘದ ನಿರ್ದೇಶಕರಾದ ಟಿ.ಜಿ.ವೆಂಕಟೇಶ್, ಟಿ.ಎಚ್.ಚಂದ್ರಶೇಖರ್, ಶಂಕರ್, ಜಯಮ್ಮ, ನರಸಮ್ಮ, ಟಿ.ವಿ.ವೆಂಕಟೇಶ್, ನೂತನ ಅಧ್ಯಕ್ಷರನ್ನು ಅಭಿನಂದಿಸಿದರು.