<p><strong>ಹೊಸಕೋಟೆ: </strong>ನಂದಗುಡಿ ಹೋಬಳಿ ಇಟ್ಟಸಂದ್ರ ವ್ಯವಸಾಯ ಸೇವಾ ಸಹಕಾರ ಸಂಘ ನಿಯಮಿತದ ಆಡಳಿತ ಮಂಡಳಿ ಚುನಾವಣೆಯಲ್ಲಿ ಶಾಸಕ ಶರತ್ ಬಚ್ಚೇಗೌಡರ ಬೆಂಬಲಿಗರು ಹಾಗೂ ಕಾಂಗ್ರೆಸ್ ಬೆಂಬಲಿಗರ ಮೈತ್ರಿ ಭರ್ಜರಿ ಗೆಲುವು ಸಾಧಿಸಿದೆ. ಬಿಜೆಪಿ ಬೆಂಬಲಿಗರು ಯಾವುದೇ ಸ್ಥಾನದಲ್ಲಿ ಗೆಲುವು ಸಾಧಿಸಿಲ್ಲ.</p>.<p>ಸಾಲಗಾರರಲ್ಲದ ಸಾಮಾನ್ಯ ಕ್ಷೇತ್ರದಲ್ಲಿ ಕೆ.ನವೀನ್ ಕುಮಾರ್, ಸಾಲಗಾರರ ಸಾಮಾನ್ಯ ಕ್ಷೇತ್ರದಲ್ಲಿ ಎಂ.ಆರ್. ಗೋಪಾಲ್, ಬಿ. ನಾರಾಯಣಪ್ಪ, ಬಿ.ಭೀಮಣ್ಣ, ವಿ. ಮುನಿನಂಜಪ್ಪ, ಟಿ.ವೆಂಕಟೇಶಪ್ಪ, ಗೆಲುವು ಸಾಧಿಸಿದ್ದಾರೆ.</p>.<p>ಹಿಂದುಳಿದ ವರ್ಗದ ಕ್ಷೇತ್ರದಲ್ಲಿ ನಾರಾಯಣಸ್ವಾಮಿ, ಇ.ಮುನಿಶಾಮಪ್ಪ ಗೆಲುವು ಪಡೆದಿದ್ದಾರೆ. ಪರಿಶಿಷ್ಟ ಜಾತಿಯ ಮೀಸಲು ಕ್ಷೇತ್ರದಲ್ಲಿ ಮುನಿಯಪ್ಪ ರಾಳಕುಂಟೆ, ಮಹಿಳಾ ಮೀಸಲಾತಿಯಲ್ಲಿ ಅಕ್ಕಯ್ಯಮ್ಮ, ನಾಗಮಣಿ ಗೆದ್ದಿದ್ದಾರೆ. ಒಟ್ಟು 11 ಕ್ಷೇತ್ರಗಳಲ್ಲಿ ಶರತ್ ಬಚ್ಚೇಗೌಡ ಬೆಂಬಲಿಗರು ಹಾಗೂ ಕಾಂಗ್ರೆಸ್ ನ ಮೈತ್ರಿ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಾರೆ.</p>.<p>ಗೆಲುವಿನ ವಿಷಯ ತಿಳಿದು ಮೈತ್ರಿಯ ಕಾರ್ಯಕರ್ತರು ಪಟಾಕಿ ಸಿಡಿಸಿ ಸಿಹಿ ಹಂಚಿ ವಿಜಯೋತ್ಸವ ಆಚರಿಸಿದರು.</p>.<p>ಇಟ್ಟಸಂದ್ರ ಗೋಪಾಲ್, ಸಂಘದ ಮಾಜಿ ಅಧ್ಯಕ್ಷ ಸೀತೇಗೌಡ, ಗ್ರೀನ್ ವ್ಯಾಲಿ ಶಾಲೆಯ ಸಂಸ್ಥಾಪಕ ಐ.ಸಿ. ಮುನಿಶಾಮೇಗೌಡ, ಪ್ರಜಾ ಫೌಂಡೇಷನ್ ಸಂಸ್ಥಾಪಕ ಅಧ್ಯಕ್ಷ ಬಿ.ಗೋಪಾಲ್, ಗ್ರಾಮ ಪಂಚಾಯತಿ ಸದಸ್ಯ ರಮೇಶ್, ರಾಳಕುಂಟೆ ಎಂಪಿಸಿಎಸ್ ಅಧ್ಯಕ್ಷ ಮುನಿಶಾಮೇಗೌಡ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೊಸಕೋಟೆ: </strong>ನಂದಗುಡಿ ಹೋಬಳಿ ಇಟ್ಟಸಂದ್ರ ವ್ಯವಸಾಯ ಸೇವಾ ಸಹಕಾರ ಸಂಘ ನಿಯಮಿತದ ಆಡಳಿತ ಮಂಡಳಿ ಚುನಾವಣೆಯಲ್ಲಿ ಶಾಸಕ ಶರತ್ ಬಚ್ಚೇಗೌಡರ ಬೆಂಬಲಿಗರು ಹಾಗೂ ಕಾಂಗ್ರೆಸ್ ಬೆಂಬಲಿಗರ ಮೈತ್ರಿ ಭರ್ಜರಿ ಗೆಲುವು ಸಾಧಿಸಿದೆ. ಬಿಜೆಪಿ ಬೆಂಬಲಿಗರು ಯಾವುದೇ ಸ್ಥಾನದಲ್ಲಿ ಗೆಲುವು ಸಾಧಿಸಿಲ್ಲ.</p>.<p>ಸಾಲಗಾರರಲ್ಲದ ಸಾಮಾನ್ಯ ಕ್ಷೇತ್ರದಲ್ಲಿ ಕೆ.ನವೀನ್ ಕುಮಾರ್, ಸಾಲಗಾರರ ಸಾಮಾನ್ಯ ಕ್ಷೇತ್ರದಲ್ಲಿ ಎಂ.ಆರ್. ಗೋಪಾಲ್, ಬಿ. ನಾರಾಯಣಪ್ಪ, ಬಿ.ಭೀಮಣ್ಣ, ವಿ. ಮುನಿನಂಜಪ್ಪ, ಟಿ.ವೆಂಕಟೇಶಪ್ಪ, ಗೆಲುವು ಸಾಧಿಸಿದ್ದಾರೆ.</p>.<p>ಹಿಂದುಳಿದ ವರ್ಗದ ಕ್ಷೇತ್ರದಲ್ಲಿ ನಾರಾಯಣಸ್ವಾಮಿ, ಇ.ಮುನಿಶಾಮಪ್ಪ ಗೆಲುವು ಪಡೆದಿದ್ದಾರೆ. ಪರಿಶಿಷ್ಟ ಜಾತಿಯ ಮೀಸಲು ಕ್ಷೇತ್ರದಲ್ಲಿ ಮುನಿಯಪ್ಪ ರಾಳಕುಂಟೆ, ಮಹಿಳಾ ಮೀಸಲಾತಿಯಲ್ಲಿ ಅಕ್ಕಯ್ಯಮ್ಮ, ನಾಗಮಣಿ ಗೆದ್ದಿದ್ದಾರೆ. ಒಟ್ಟು 11 ಕ್ಷೇತ್ರಗಳಲ್ಲಿ ಶರತ್ ಬಚ್ಚೇಗೌಡ ಬೆಂಬಲಿಗರು ಹಾಗೂ ಕಾಂಗ್ರೆಸ್ ನ ಮೈತ್ರಿ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಾರೆ.</p>.<p>ಗೆಲುವಿನ ವಿಷಯ ತಿಳಿದು ಮೈತ್ರಿಯ ಕಾರ್ಯಕರ್ತರು ಪಟಾಕಿ ಸಿಡಿಸಿ ಸಿಹಿ ಹಂಚಿ ವಿಜಯೋತ್ಸವ ಆಚರಿಸಿದರು.</p>.<p>ಇಟ್ಟಸಂದ್ರ ಗೋಪಾಲ್, ಸಂಘದ ಮಾಜಿ ಅಧ್ಯಕ್ಷ ಸೀತೇಗೌಡ, ಗ್ರೀನ್ ವ್ಯಾಲಿ ಶಾಲೆಯ ಸಂಸ್ಥಾಪಕ ಐ.ಸಿ. ಮುನಿಶಾಮೇಗೌಡ, ಪ್ರಜಾ ಫೌಂಡೇಷನ್ ಸಂಸ್ಥಾಪಕ ಅಧ್ಯಕ್ಷ ಬಿ.ಗೋಪಾಲ್, ಗ್ರಾಮ ಪಂಚಾಯತಿ ಸದಸ್ಯ ರಮೇಶ್, ರಾಳಕುಂಟೆ ಎಂಪಿಸಿಎಸ್ ಅಧ್ಯಕ್ಷ ಮುನಿಶಾಮೇಗೌಡ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>