<p><strong>ದೊಡ್ಡಬಳ್ಳಾಪುರ: </strong>ನಗರದ ವಿವಿಧ ಯೋಗ ಕೇಂದ್ರಗಳಲ್ಲಿ ರಥಸಪ್ತಮಿ ಅಂಗವಾಗಿ ಸಾಮೂಹಿಕ ಸೂರ್ಯ ನಮಸ್ಕಾರ ಕಾರ್ಯಕ್ರಮ ನಡೆಯಿತು.</p>.<p>ಮುಖ್ಯರಸ್ತೆಯ ವೈಕುಂಠ ಜನಾರ್ದನ ಸ್ವಾಮಿ ದೇವಾಲಯದಲ್ಲಿ ಪ್ರಭುದೇವ ಯೋಗ ಕೇಂದ್ರದಿಂದ 108 ಬಾರಿ ಸೂರ್ಯ ನಮಸ್ಕಾರ ಕಾರ್ಯಕ್ರಮವು ಯೋಗ ಶಿಕ್ಷಕ ಪಿ.ಕೆ. ಶ್ರೀನಿವಾಸ್ ನೇತೃತ್ವದಲ್ಲಿ<br />ನಡೆಯಿತು.</p>.<p>ಯೋಗ ಶಿಕ್ಷಕ ಬಿ.ಎಲ್. ಸೀತಾರಾಂ ಮಾತನಾಡಿ, ಸೂರ್ಯನಿಲ್ಲದೆ ಜೀವನದ ಅಸ್ತಿತ್ವ ಇರಲು ಸಾಧ್ಯವಿಲ್ಲ. ರಥಸಪ್ತಮಿ ದಿನದಂದು ಸೂರ್ಯನ ಪೂಜೆಯೇ ಮುಖ್ಯ ಆಚರಣೆಯಾಗಿದೆ ಎಂದರು.</p>.<p>ಸೂರ್ಯನ ಪ್ರಕಾಶ ಹೆಚ್ಚುತ್ತಿರುವುದರಿಂದ ಚಳಿ ಮುದುಡಿಕೊಂಡು ಮೈಯಲ್ಲಿ ನವಚೇತನ ತುಂಬಲಿದೆ. ನೇಸರನನ್ನು ಪೂಜಿಸುವುದು ಅನಾದಿ ಕಾಲದಿಂದಲೂ ನಡೆದುಕೊಂಡು ಬಂದಿದೆ. ನಿಯಮಿತ ಪೌಷ್ಟಿಕ ಆಹಾರ, ಯೋಗ, ಧ್ಯಾನದ ಮೂಲಕ ನಮ್ಮ ದೇಹವನ್ನು ರೋಗಗಳಿಂದ ಕಾಪಾಡಿಕೊಳ್ಳಲು ಸಾಧ್ಯ ಎಂದು ತಿಳಿಸಿದರು.</p>.<p>ಯೋಗದಲ್ಲಿ ಸೂರ್ಯ ನಮಸ್ಕಾರ ಪ್ರಮುಖವಾದುದು. ಇದರಿಂದ ಹಲವಾರು ಉಪಯೋಗಗಳಿವೆ. ಉತ್ತಮ ಆರೋಗ್ಯಕ್ಕಾಗಿ ಸೂರ್ಯ ನಮಸ್ಕಾರವನ್ನು ನಿತ್ಯ ಮಾಡುವುದು ಉತ್ತಮ ಎಂದು ಸಲಹೆ<br />ನೀಡಿದರು.</p>.<p>ಶ್ರೀಪತಂಜಲಿ ಯೋಗ ಶಿಕ್ಷಣ ಸಮಿತಿಯಿಂದ ಯೋಗ ಶಿಕ್ಷಕ ಬಸಪ್ಪ ನೇತೃತ್ವದಡಿ ನಗರದ ಮುಖ್ಯರಸ್ತೆಯ ಬಸವಣ್ಣ ದೇವಾಲಯದಲ್ಲಿ ಸಾಮೂಹಿಕ ಸೂರ್ಯ ನಮಸ್ಕಾರ ಕಾರ್ಯಕ್ರಮ ನಡೆಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದೊಡ್ಡಬಳ್ಳಾಪುರ: </strong>ನಗರದ ವಿವಿಧ ಯೋಗ ಕೇಂದ್ರಗಳಲ್ಲಿ ರಥಸಪ್ತಮಿ ಅಂಗವಾಗಿ ಸಾಮೂಹಿಕ ಸೂರ್ಯ ನಮಸ್ಕಾರ ಕಾರ್ಯಕ್ರಮ ನಡೆಯಿತು.</p>.<p>ಮುಖ್ಯರಸ್ತೆಯ ವೈಕುಂಠ ಜನಾರ್ದನ ಸ್ವಾಮಿ ದೇವಾಲಯದಲ್ಲಿ ಪ್ರಭುದೇವ ಯೋಗ ಕೇಂದ್ರದಿಂದ 108 ಬಾರಿ ಸೂರ್ಯ ನಮಸ್ಕಾರ ಕಾರ್ಯಕ್ರಮವು ಯೋಗ ಶಿಕ್ಷಕ ಪಿ.ಕೆ. ಶ್ರೀನಿವಾಸ್ ನೇತೃತ್ವದಲ್ಲಿ<br />ನಡೆಯಿತು.</p>.<p>ಯೋಗ ಶಿಕ್ಷಕ ಬಿ.ಎಲ್. ಸೀತಾರಾಂ ಮಾತನಾಡಿ, ಸೂರ್ಯನಿಲ್ಲದೆ ಜೀವನದ ಅಸ್ತಿತ್ವ ಇರಲು ಸಾಧ್ಯವಿಲ್ಲ. ರಥಸಪ್ತಮಿ ದಿನದಂದು ಸೂರ್ಯನ ಪೂಜೆಯೇ ಮುಖ್ಯ ಆಚರಣೆಯಾಗಿದೆ ಎಂದರು.</p>.<p>ಸೂರ್ಯನ ಪ್ರಕಾಶ ಹೆಚ್ಚುತ್ತಿರುವುದರಿಂದ ಚಳಿ ಮುದುಡಿಕೊಂಡು ಮೈಯಲ್ಲಿ ನವಚೇತನ ತುಂಬಲಿದೆ. ನೇಸರನನ್ನು ಪೂಜಿಸುವುದು ಅನಾದಿ ಕಾಲದಿಂದಲೂ ನಡೆದುಕೊಂಡು ಬಂದಿದೆ. ನಿಯಮಿತ ಪೌಷ್ಟಿಕ ಆಹಾರ, ಯೋಗ, ಧ್ಯಾನದ ಮೂಲಕ ನಮ್ಮ ದೇಹವನ್ನು ರೋಗಗಳಿಂದ ಕಾಪಾಡಿಕೊಳ್ಳಲು ಸಾಧ್ಯ ಎಂದು ತಿಳಿಸಿದರು.</p>.<p>ಯೋಗದಲ್ಲಿ ಸೂರ್ಯ ನಮಸ್ಕಾರ ಪ್ರಮುಖವಾದುದು. ಇದರಿಂದ ಹಲವಾರು ಉಪಯೋಗಗಳಿವೆ. ಉತ್ತಮ ಆರೋಗ್ಯಕ್ಕಾಗಿ ಸೂರ್ಯ ನಮಸ್ಕಾರವನ್ನು ನಿತ್ಯ ಮಾಡುವುದು ಉತ್ತಮ ಎಂದು ಸಲಹೆ<br />ನೀಡಿದರು.</p>.<p>ಶ್ರೀಪತಂಜಲಿ ಯೋಗ ಶಿಕ್ಷಣ ಸಮಿತಿಯಿಂದ ಯೋಗ ಶಿಕ್ಷಕ ಬಸಪ್ಪ ನೇತೃತ್ವದಡಿ ನಗರದ ಮುಖ್ಯರಸ್ತೆಯ ಬಸವಣ್ಣ ದೇವಾಲಯದಲ್ಲಿ ಸಾಮೂಹಿಕ ಸೂರ್ಯ ನಮಸ್ಕಾರ ಕಾರ್ಯಕ್ರಮ ನಡೆಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>