<p><strong>ದೇವನಹಳ್ಳಿ:</strong> ಪಟ್ಟಣದ ಆಕಾಶ್ ಗ್ರೂಪ್ ಆಫ್ ಇನ್ಸ್ಟಿಟ್ಯೂಟ್ನಲ್ಲಿ ಪ್ರಥಮ ವರ್ಷದ ವಿದ್ಯಾರ್ಥಿಗಳನ್ನು ರ್ಯಾಗ್ ಮಾಡಿದ ಆರೋಪದ ಮೇಲೆ 23 ಹಿರಿಯ ವಿದ್ಯಾರ್ಥಿಗಳ ವಿರುದ್ಧ ದೇವನಹಳ್ಳಿ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<p>ದೂರು ಆಧರಿಸಿ ಬಿಲಾಲ್, ಝಿರಿಲ್ ಮತ್ತು ಮಿಶಾಲ್ ಎಂಬ ಮೂವರು ಹಿರಿಯ ವಿದ್ಯಾರ್ಥಿಗಳನ್ನು ಪೊಲೀಸರು ಬಂಧಿಸಿದ್ದಾರೆ. ದೂರು ದಾಖಲಾಗುತ್ತಲೇ ತಲೆ ಮರೆಸಿಕೊಂಡಿರುವ ಉಳಿದ ವಿದ್ಯಾರ್ಥಿಗಳಿಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ.</p>.<p>ಹಿರಿಯ ವಿದ್ಯಾರ್ಥಿಗಳು ಮದ್ಯ, ಸಿಗರೇಟ್ ತರಲು ತಮ್ಮನ್ನು ಬಳಸಿಕೊಳ್ಳುತ್ತಿದ್ದರು. ಪುಸ್ತಕಗಳನ್ನು ಹಿಡಿದು ನಿಲ್ಲುವಂತೆ ಒತ್ತಾಯಿಸಿ ಮಾನಸಿಕ ಹಾಗೂ ದೈಹಿಕ ಕಿರುಕುಳ ನೀಡುತ್ತಿದ್ದರೆಂದು ಕಿರಿಯ ವಿದ್ಯಾರ್ಥಿಗಳು ದೂರಿನಲ್ಲಿ ಆರೋಪಿಸಿದ್ದಾರೆ.</p>.<p>ರ್ಯಾಗಿಂಗ್ ಕುರಿತು ವಿದ್ಯಾರ್ಥಿಗಳು ಕಾಲೇಜು ಆಡಳಿತಕ್ಕೆ ದೂರು ನೀಡಿದ್ದರು. ಈ ಬಗ್ಗೆ ಹಿರಿಯ ವಿದ್ಯಾರ್ಥಿಗಳನ್ನು ಪ್ರಶ್ನಿಸಿದ ಕಾಲೇಜಿನ ಆಡಳಿತ ವಿಭಾಗದ ಮುಖ್ಯಸ್ಥ ಮಿಥುನ್ ಮಾಧವನ್ ಮೇಲೆ ಆರೋಪಿಗಳು ಹಲ್ಲೆ ನಡೆಸಿದ್ದರು ಎನ್ನಲಾಗಿದೆ.</p>.<p>ಕಿರಿಯ ವಿದ್ಯಾರ್ಥಿಗಳ ಮೇಲೂ ಕಬ್ಬಿಣದ ಸರಳು, ಕಲ್ಲು ಹಾಗೂ ಕಟ್ಟಿಗೆಯಿಂದ ಹಲ್ಲೆ ನಡೆಸಿರುವ ಆರೋಪ ಕೇಳಿಬಂದಿದೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದೇವನಹಳ್ಳಿ:</strong> ಪಟ್ಟಣದ ಆಕಾಶ್ ಗ್ರೂಪ್ ಆಫ್ ಇನ್ಸ್ಟಿಟ್ಯೂಟ್ನಲ್ಲಿ ಪ್ರಥಮ ವರ್ಷದ ವಿದ್ಯಾರ್ಥಿಗಳನ್ನು ರ್ಯಾಗ್ ಮಾಡಿದ ಆರೋಪದ ಮೇಲೆ 23 ಹಿರಿಯ ವಿದ್ಯಾರ್ಥಿಗಳ ವಿರುದ್ಧ ದೇವನಹಳ್ಳಿ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<p>ದೂರು ಆಧರಿಸಿ ಬಿಲಾಲ್, ಝಿರಿಲ್ ಮತ್ತು ಮಿಶಾಲ್ ಎಂಬ ಮೂವರು ಹಿರಿಯ ವಿದ್ಯಾರ್ಥಿಗಳನ್ನು ಪೊಲೀಸರು ಬಂಧಿಸಿದ್ದಾರೆ. ದೂರು ದಾಖಲಾಗುತ್ತಲೇ ತಲೆ ಮರೆಸಿಕೊಂಡಿರುವ ಉಳಿದ ವಿದ್ಯಾರ್ಥಿಗಳಿಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ.</p>.<p>ಹಿರಿಯ ವಿದ್ಯಾರ್ಥಿಗಳು ಮದ್ಯ, ಸಿಗರೇಟ್ ತರಲು ತಮ್ಮನ್ನು ಬಳಸಿಕೊಳ್ಳುತ್ತಿದ್ದರು. ಪುಸ್ತಕಗಳನ್ನು ಹಿಡಿದು ನಿಲ್ಲುವಂತೆ ಒತ್ತಾಯಿಸಿ ಮಾನಸಿಕ ಹಾಗೂ ದೈಹಿಕ ಕಿರುಕುಳ ನೀಡುತ್ತಿದ್ದರೆಂದು ಕಿರಿಯ ವಿದ್ಯಾರ್ಥಿಗಳು ದೂರಿನಲ್ಲಿ ಆರೋಪಿಸಿದ್ದಾರೆ.</p>.<p>ರ್ಯಾಗಿಂಗ್ ಕುರಿತು ವಿದ್ಯಾರ್ಥಿಗಳು ಕಾಲೇಜು ಆಡಳಿತಕ್ಕೆ ದೂರು ನೀಡಿದ್ದರು. ಈ ಬಗ್ಗೆ ಹಿರಿಯ ವಿದ್ಯಾರ್ಥಿಗಳನ್ನು ಪ್ರಶ್ನಿಸಿದ ಕಾಲೇಜಿನ ಆಡಳಿತ ವಿಭಾಗದ ಮುಖ್ಯಸ್ಥ ಮಿಥುನ್ ಮಾಧವನ್ ಮೇಲೆ ಆರೋಪಿಗಳು ಹಲ್ಲೆ ನಡೆಸಿದ್ದರು ಎನ್ನಲಾಗಿದೆ.</p>.<p>ಕಿರಿಯ ವಿದ್ಯಾರ್ಥಿಗಳ ಮೇಲೂ ಕಬ್ಬಿಣದ ಸರಳು, ಕಲ್ಲು ಹಾಗೂ ಕಟ್ಟಿಗೆಯಿಂದ ಹಲ್ಲೆ ನಡೆಸಿರುವ ಆರೋಪ ಕೇಳಿಬಂದಿದೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>