ಕಚೇರಿಯಲ್ಲಿ ಪೂಜೆ ಸಲ್ಲಿಸಿ ಮಾತನಾಡಿದ ಅವರು, ‘2014ರಲ್ಲಿ ದೇವನಹಳ್ಳಿ ತಾಲ್ಲೂಕಿನ ನಾಗನಾಯಕನಹಳ್ಳಿ, ಪಾಳ್ಯ, ಪೋಲನಹಳ್ಳಿ, ಮುದ್ದೇನಹಳ್ಳಿ ಗ್ರಾಮ ವ್ಯಾಪ್ತಿಯಲ್ಲಿ ಭೂಸ್ವಾಧೀನ ಮಾಡಲಾಗಿದೆ. ಈ ಪೈಕಿ 593 ಎಕರೆ ಸರ್ಕಾರಿ ಜಾಗ, 609 ಎಕರೆ ರೈತರ ಭೂ ಸ್ವಾಧೀನ ಪ್ರಕ್ರಿಯೆಯಲ್ಲಿ ಒಳಗೊಂಡಿದೆ. ಒಟ್ಟು 1202 ಎಕರೆಯಾಗಿದೆ. ಒಟ್ಟು 20 ವಿವಿಧ ದಾಖಲೆಗಳನ್ನು ಭೂಮಿ ಕಳೆದುಕೊಳ್ಳುತ್ತಿರುವ ರೈತರು ನೀಡಿ ಪರಿಹಾರ ಧನ ಪಡೆದುಕೊಳ್ಳಬೇಕು’ ಎಂದು ಹೇಳಿದರು.