<p><strong>ದೇವನಹಳ್ಳಿ:</strong> ರಾಜ್ಯದ ಜನತೆಗೆ ಮಾತು ಕೊಟ್ಟಂತೆ ಐದು ಗ್ರಾರಂಟಿ ಈಡೇರಿಸಿರುವ ಕಾಂಗ್ರೆಸ್ ಸರ್ಕಾರವು ಅಭಿವೃದ್ಧಿಗಾಗಿ ಸಾಕಷ್ಟು ಯೋಜನೆ ರೂಪಿಸಿದೆ. ಅದರ ಫಲವಾಗಿ ವಿವಿಧ ಕಾಮಗಾರಿಗಳಿಗೆ ಚಾಲನೆ ನೀಡಲಾಗುತ್ತಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್.ಮುನಿಯಪ್ಪ ಹೇಳಿದರು.</p>.<p>ತಾಲ್ಲೂಕಿನ ವಾಣಿಜ್ಯ ತೆರಿಗೆ ಕಚೇರಿ ಆವರಣದಲ್ಲಿ ಭೌತಿಕ ಪರೀಕ್ಷಾ ಅಂಗಳದ ಸಂಗ್ರಹ ಕೊಠಡಿ ಸೇರಿದಂತೆ ಇತರ ಕಾಮಗಾರಿಗಳಿಗೆ ಶುಕ್ರವಾರ ಚಾಲನೆ ನೀಡಿ ಅವರು ಮಾತನಾಡಿದರು.</p>.<p>ಸಾರ್ವಜನಿಕರು ಸುಗಮ ಸಂಚಾರಕ್ಕಾಗಿ ಗುಣಮಟ್ಟದ ರಸ್ತೆ ನಿರ್ಮಾಣಕ್ಕೆ ಮೊದಲ ಆದ್ಯತೆ ನೀಡಲಾಗಿದ್ದು, ರಸ್ತೆಗಳ ಅಭಿವೃದ್ಧಿಯಿಂದಾಗಿ ನಗರ, ಗ್ರಾಮೀಣ ಪ್ರದೇಶಗಳಲ್ಲಿ ವ್ಯಾಪಾರ ವಹಿವಾಟು ಹೆಚ್ಚಾಗಿ, ಸ್ಥಳೀಯವಾಗಿ ಆರ್ಥಿಕ ಮಟ್ಟ ಸುಧಾರಣೆಯಾಗಲಿದೆ ಎಂದು ತಿಳಿಸಿದರು.</p>.<p>ಗುತ್ತಿಗೆದಾರರು ಗುಣಮಟ್ಟದ ಕಾಮಗಾರಿ ಮಾಡಬೇಕು. ಸರ್ಕಾರದಿಂದ ಯಾವುದೇ ರೀತಿಯಲ್ಲಿಯೂ ಅನುದಾನ ಕೊರತೆಯಾಗದಂತೆ ಸಹಕಾರ ನೀಡಲಾಗುವುದು. ವಿಳಂಬ ಮಾಡದೇ ಶೀಘ್ರವಾಗಿ ಅಭಿವೃದ್ಧಿ ಕಾರ್ಯ ಸಾಗಬೇಕು ಎಂದು ಎಚ್ಚರಿಸಿದರು.</p>.<p>ಕೆಪಿಸಿಸಿ ಸದಸ್ಯ ವಿ.ಶಾಂತಕುಮಾರ್ ಮಾತನಾಡಿದರು.</p>.<p>ಲೋಕೋಪಯೋಗಿ ಇಲಾಖೆಯ ರವೀಂದ್ರ ಸಿಂಗ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪ್ರಸನ್ನ ಕುಮಾರ್, ಚೌಡಪ್ಪನಹಳ್ಳಿ ಲೋಕೇಶ್, ಬೈರೇಗೌಡ, ಮುರಳಿ, ಬೂದಿಗೆರೆ ಲಕ್ಷ್ಮಣ್ ಗೌಡ, ಲಕ್ಷ್ಮಣ್ ಮೂರ್ತಿ, ಮಂಜುನಾಥ್, ರಾಜಶೇಖರ್, ಶಂಕರಪ್ಪ, ಗಂಗಾಧರ್, ದೇವನಹಳ್ಳಿ ಜಗನ್ನಾಥ್ ಇದ್ದರು.</p>.<div><div class="bigfact-title">ಆರು ಪಥದ ರಸ್ತೆಗೆ ಒತ್ತಾಯ</div><div class="bigfact-description">ದೇವನಹಳ್ಳಿಯಲ್ಲಿ ಹಾದು ಹೋಗಿರುವ ನಾಲ್ಕು ಪಥದ ಬೆಂಗಳೂರು -ಬಳ್ಳಾರಿ ರಸ್ತೆಯನ್ನು ಆರು ಪಥದ ರಸ್ತೆಯನ್ನಾಗಿ ಮೇಲ್ದರ್ಜೆಗೆ ಏರಿಸಲು ಪಟ್ಟಣದ ಮುಖಂಡರು ಸಚಿವರಲ್ಲಿ ಮನವಿ ಮಾಡಿದರು. ದಿನೇ ದಿನೇ ವಾಹನ ಸಂಚಾರವೂ ಹೆಚ್ಚಾಗುತ್ತಿದ್ದು ಭವಿಷ್ಯದ ದೃಷ್ಟಿಯಿಂದ ರಸ್ತೆ ವಿಸ್ತರಣೆಗೆ ಒತ್ತಾಯಿಸಿದರು.</div></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದೇವನಹಳ್ಳಿ:</strong> ರಾಜ್ಯದ ಜನತೆಗೆ ಮಾತು ಕೊಟ್ಟಂತೆ ಐದು ಗ್ರಾರಂಟಿ ಈಡೇರಿಸಿರುವ ಕಾಂಗ್ರೆಸ್ ಸರ್ಕಾರವು ಅಭಿವೃದ್ಧಿಗಾಗಿ ಸಾಕಷ್ಟು ಯೋಜನೆ ರೂಪಿಸಿದೆ. ಅದರ ಫಲವಾಗಿ ವಿವಿಧ ಕಾಮಗಾರಿಗಳಿಗೆ ಚಾಲನೆ ನೀಡಲಾಗುತ್ತಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್.ಮುನಿಯಪ್ಪ ಹೇಳಿದರು.</p>.<p>ತಾಲ್ಲೂಕಿನ ವಾಣಿಜ್ಯ ತೆರಿಗೆ ಕಚೇರಿ ಆವರಣದಲ್ಲಿ ಭೌತಿಕ ಪರೀಕ್ಷಾ ಅಂಗಳದ ಸಂಗ್ರಹ ಕೊಠಡಿ ಸೇರಿದಂತೆ ಇತರ ಕಾಮಗಾರಿಗಳಿಗೆ ಶುಕ್ರವಾರ ಚಾಲನೆ ನೀಡಿ ಅವರು ಮಾತನಾಡಿದರು.</p>.<p>ಸಾರ್ವಜನಿಕರು ಸುಗಮ ಸಂಚಾರಕ್ಕಾಗಿ ಗುಣಮಟ್ಟದ ರಸ್ತೆ ನಿರ್ಮಾಣಕ್ಕೆ ಮೊದಲ ಆದ್ಯತೆ ನೀಡಲಾಗಿದ್ದು, ರಸ್ತೆಗಳ ಅಭಿವೃದ್ಧಿಯಿಂದಾಗಿ ನಗರ, ಗ್ರಾಮೀಣ ಪ್ರದೇಶಗಳಲ್ಲಿ ವ್ಯಾಪಾರ ವಹಿವಾಟು ಹೆಚ್ಚಾಗಿ, ಸ್ಥಳೀಯವಾಗಿ ಆರ್ಥಿಕ ಮಟ್ಟ ಸುಧಾರಣೆಯಾಗಲಿದೆ ಎಂದು ತಿಳಿಸಿದರು.</p>.<p>ಗುತ್ತಿಗೆದಾರರು ಗುಣಮಟ್ಟದ ಕಾಮಗಾರಿ ಮಾಡಬೇಕು. ಸರ್ಕಾರದಿಂದ ಯಾವುದೇ ರೀತಿಯಲ್ಲಿಯೂ ಅನುದಾನ ಕೊರತೆಯಾಗದಂತೆ ಸಹಕಾರ ನೀಡಲಾಗುವುದು. ವಿಳಂಬ ಮಾಡದೇ ಶೀಘ್ರವಾಗಿ ಅಭಿವೃದ್ಧಿ ಕಾರ್ಯ ಸಾಗಬೇಕು ಎಂದು ಎಚ್ಚರಿಸಿದರು.</p>.<p>ಕೆಪಿಸಿಸಿ ಸದಸ್ಯ ವಿ.ಶಾಂತಕುಮಾರ್ ಮಾತನಾಡಿದರು.</p>.<p>ಲೋಕೋಪಯೋಗಿ ಇಲಾಖೆಯ ರವೀಂದ್ರ ಸಿಂಗ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪ್ರಸನ್ನ ಕುಮಾರ್, ಚೌಡಪ್ಪನಹಳ್ಳಿ ಲೋಕೇಶ್, ಬೈರೇಗೌಡ, ಮುರಳಿ, ಬೂದಿಗೆರೆ ಲಕ್ಷ್ಮಣ್ ಗೌಡ, ಲಕ್ಷ್ಮಣ್ ಮೂರ್ತಿ, ಮಂಜುನಾಥ್, ರಾಜಶೇಖರ್, ಶಂಕರಪ್ಪ, ಗಂಗಾಧರ್, ದೇವನಹಳ್ಳಿ ಜಗನ್ನಾಥ್ ಇದ್ದರು.</p>.<div><div class="bigfact-title">ಆರು ಪಥದ ರಸ್ತೆಗೆ ಒತ್ತಾಯ</div><div class="bigfact-description">ದೇವನಹಳ್ಳಿಯಲ್ಲಿ ಹಾದು ಹೋಗಿರುವ ನಾಲ್ಕು ಪಥದ ಬೆಂಗಳೂರು -ಬಳ್ಳಾರಿ ರಸ್ತೆಯನ್ನು ಆರು ಪಥದ ರಸ್ತೆಯನ್ನಾಗಿ ಮೇಲ್ದರ್ಜೆಗೆ ಏರಿಸಲು ಪಟ್ಟಣದ ಮುಖಂಡರು ಸಚಿವರಲ್ಲಿ ಮನವಿ ಮಾಡಿದರು. ದಿನೇ ದಿನೇ ವಾಹನ ಸಂಚಾರವೂ ಹೆಚ್ಚಾಗುತ್ತಿದ್ದು ಭವಿಷ್ಯದ ದೃಷ್ಟಿಯಿಂದ ರಸ್ತೆ ವಿಸ್ತರಣೆಗೆ ಒತ್ತಾಯಿಸಿದರು.</div></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>