<p>ಆನೇಕಲ್: ಹಿಂದೂ ಧರ್ಮವನ್ನು ಒಡೆಯುವ ಸಂಘಟಿತ ಪ್ರಯತ್ನ ಹಾಗೂ ಪಿತೂರಿ ರಾಜ್ಯದ ಹಲವೆಡೆ ನಡೆಯುತ್ತಿದೆ. ಕೋಮುಗಲಭೆ ಹಾಗೂ ಸಮಾಜ ವಿಭಜನೆ ಮಾಡುವ ಶಕ್ತಿಗಳಿಗೆ ರಾಜ್ಯ ಸರ್ಕಾರ ವೇದಿಕೆ ಕಲ್ಪಿಸುತ್ತಿದೆ ಎಂದು ಎಂದು ಸಂಸದ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಹೇಳಿದರು.</p>.<p>ಆನೇಕಲ್ನಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮದ್ದೂರಿನಲ್ಲಿ ಗಣಪತಿ ಮೆರವಣಿಗೆಗೆ ಕಲ್ಲು ಹೊಡೆದವರು ವಿರುದ್ಧ ಕ್ರಮ ಕೈಗೊಳ್ಳದೇ ಸಾಮಾನ್ಯರ ಮೇಲೆ ಪ್ರಕರಣ ದಾಖಲಿಸಲಾಗಿದೆ. ಕಳೆದ ವರ್ಷ ನಾಗಮಂಗಲದಲ್ಲಿ ಗಣೇಶ ವಿಗ್ರಹವನ್ನೇ ಪೊಲೀಸರು ತಮ್ಮ ವಾಹನದಲ್ಲಿ ಹೊತ್ತೊಯ್ದಿದ್ದರು. ಈ ವರ್ಷ ಮದ್ದೂರು, ಹಾಸನ, ಭದ್ರಾವತಿ ಸೇರಿದಂತೆ ಹಲವೆಡೆ ಗಣಪತಿ ಹಬ್ಬದ ಆಚರಣೆ ಸಂದರ್ಭದಲ್ಲಿ ಶಾಂತಿ ಸುವ್ಯವಸ್ಥೆಗೆ ಧಕ್ಕೆ ತರಲಾಗಿದೆ ಎಂದು ದೂರಿದರು.</p>.<p>ರಾಜ್ಯದಲ್ಲಿರುವ ಆಡಳಿತ ಪಕ್ಷ ಸಮಾಜದಲ್ಲಿ ಶಾಂತಿ ಸ್ಥಾಪಿಸಲು ಆದ್ಯತೆ ನೀಡಬೇಕು. ಹಿಂದೂ ಸಮಾಜವನ್ನು ಒಡೆಯುವಂತಹ ದುಷ್ಟ ಶಕ್ತಿಗಳ ವಿರುದ್ಧ ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಆನೇಕಲ್: ಹಿಂದೂ ಧರ್ಮವನ್ನು ಒಡೆಯುವ ಸಂಘಟಿತ ಪ್ರಯತ್ನ ಹಾಗೂ ಪಿತೂರಿ ರಾಜ್ಯದ ಹಲವೆಡೆ ನಡೆಯುತ್ತಿದೆ. ಕೋಮುಗಲಭೆ ಹಾಗೂ ಸಮಾಜ ವಿಭಜನೆ ಮಾಡುವ ಶಕ್ತಿಗಳಿಗೆ ರಾಜ್ಯ ಸರ್ಕಾರ ವೇದಿಕೆ ಕಲ್ಪಿಸುತ್ತಿದೆ ಎಂದು ಎಂದು ಸಂಸದ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಹೇಳಿದರು.</p>.<p>ಆನೇಕಲ್ನಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮದ್ದೂರಿನಲ್ಲಿ ಗಣಪತಿ ಮೆರವಣಿಗೆಗೆ ಕಲ್ಲು ಹೊಡೆದವರು ವಿರುದ್ಧ ಕ್ರಮ ಕೈಗೊಳ್ಳದೇ ಸಾಮಾನ್ಯರ ಮೇಲೆ ಪ್ರಕರಣ ದಾಖಲಿಸಲಾಗಿದೆ. ಕಳೆದ ವರ್ಷ ನಾಗಮಂಗಲದಲ್ಲಿ ಗಣೇಶ ವಿಗ್ರಹವನ್ನೇ ಪೊಲೀಸರು ತಮ್ಮ ವಾಹನದಲ್ಲಿ ಹೊತ್ತೊಯ್ದಿದ್ದರು. ಈ ವರ್ಷ ಮದ್ದೂರು, ಹಾಸನ, ಭದ್ರಾವತಿ ಸೇರಿದಂತೆ ಹಲವೆಡೆ ಗಣಪತಿ ಹಬ್ಬದ ಆಚರಣೆ ಸಂದರ್ಭದಲ್ಲಿ ಶಾಂತಿ ಸುವ್ಯವಸ್ಥೆಗೆ ಧಕ್ಕೆ ತರಲಾಗಿದೆ ಎಂದು ದೂರಿದರು.</p>.<p>ರಾಜ್ಯದಲ್ಲಿರುವ ಆಡಳಿತ ಪಕ್ಷ ಸಮಾಜದಲ್ಲಿ ಶಾಂತಿ ಸ್ಥಾಪಿಸಲು ಆದ್ಯತೆ ನೀಡಬೇಕು. ಹಿಂದೂ ಸಮಾಜವನ್ನು ಒಡೆಯುವಂತಹ ದುಷ್ಟ ಶಕ್ತಿಗಳ ವಿರುದ್ಧ ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>