<p><strong>ವಿಜಯಪುರ:</strong> ಯಾವುದೇ ಸಮುದಾಯ ಅಭಿವೃದ್ಧಿಯತ್ತ ಸಾಗಬೇಕಾದರೆ ಸಂಘಟಿತ ಹೋರಾಟ ಅಗತ್ಯ ಎಂದು ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾದ ಉಪಾಧ್ಯಕ್ಷ ಶಂಕರನಾರಾಯಣ ಹೇಳಿದರು.</p>.<p>ಮಹಾಸಭಾ ಅಧ್ಯಕ್ಷ ಸ್ಥಾನದ ಚುನಾವಣೆ ಹಿನ್ನೆಲೆಯಲ್ಲಿ ಚನ್ನಕೇಶವಸ್ವಾಮಿ ದೇವಾಲಯದ ಆವರಣದಲ್ಲಿ ಅಧ್ಯಕ್ಷ ಕೆ.ಎನ್.ವೆಂಕಟನಾರಾಯಣ ಅವರ ಪರವಾಗಿ ಮತಯಾಚನೆ ಮಾಡಿ ಮಾತನಾಡಿದರು.</p>.<p>ಸಮುದಾಯದವರು ಒಳಜಗಳ ಬಿಟ್ಟು ಸಂಘಟಿತವಾಗಿ ಹೋರಾಟ ಮಾಡುವುದನ್ನು ರೂಢಿಸಿಕೊಳ್ಳಬೇಕು ಎಂದರು.</p>.<p>ಗ್ರಾಮಾಂತರ ಜಿಲ್ಲಾ ಬಡಗನಾಡು ಬ್ರಾಹ್ಮಣ ಸಂಘದ ಉಪಾಧ್ಯಕ್ಷ ಹೊಸಕೋಟೆ ಮಂಜುನಾಥ ಮಾತನಾಡಿ, ಸಮುದಾಯದ ಏಳಿಗೆಗಾಗಿ ಶ್ರಮಿಸುತ್ತಿರುವ ವೆಂಕಟನಾರಾಯಣ ಅವರು ಸಂಘಟನೆಯಲ್ಲಿ ಮುಖ್ಯ ಪಾತ್ರವಹಿಸಿದ್ದಾರೆ ಅವರನ್ನು ಬೆಂಬಲಿಸಬೇಕಾಗಿದೆ ಎಂದರು.</p>.<p>ರಾಜ್ಯ ಕಾರ್ಯಕಾರಣಿ ಸಮಿತಿಯ ಸದಸ್ಯರಾದ ವಿಶ್ವನಾಥ್, ಮಂಜುನಾಥ್ ಶರ್ಮಾ, ದೇವನಹಳ್ಳಿ ತಾಲ್ಲೂಕು ಬ್ರಾಹ್ಮಣ ಮಹಾಸಭಾ ಅದ್ಯಕ್ಷ ದೇ.ಸೂ.ನಾಗರಾಜು, ಉಪಾಧ್ಯಕ್ಷ ದೀಕ್ಷಿತ್, ವಿಜಯಪುರ ಬ್ರಾಹ್ಮಣ ಸೇವಾ ಟ್ರಸ್ಟ್ ಅಧ್ಯಕ್ಷ ಮುರುಳಿ ಭಟ್ಟಾಚಾರ್ಯ, ಉಪಾದ್ಯಕ್ಷ ಎಚ್.ಆರ್.ಶೇಷಗಿರಿರಾವ್, ಎಸ್. ರವಿ, ಜಿ.ಸತೀಶಕುಮಾರ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಿಜಯಪುರ:</strong> ಯಾವುದೇ ಸಮುದಾಯ ಅಭಿವೃದ್ಧಿಯತ್ತ ಸಾಗಬೇಕಾದರೆ ಸಂಘಟಿತ ಹೋರಾಟ ಅಗತ್ಯ ಎಂದು ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾದ ಉಪಾಧ್ಯಕ್ಷ ಶಂಕರನಾರಾಯಣ ಹೇಳಿದರು.</p>.<p>ಮಹಾಸಭಾ ಅಧ್ಯಕ್ಷ ಸ್ಥಾನದ ಚುನಾವಣೆ ಹಿನ್ನೆಲೆಯಲ್ಲಿ ಚನ್ನಕೇಶವಸ್ವಾಮಿ ದೇವಾಲಯದ ಆವರಣದಲ್ಲಿ ಅಧ್ಯಕ್ಷ ಕೆ.ಎನ್.ವೆಂಕಟನಾರಾಯಣ ಅವರ ಪರವಾಗಿ ಮತಯಾಚನೆ ಮಾಡಿ ಮಾತನಾಡಿದರು.</p>.<p>ಸಮುದಾಯದವರು ಒಳಜಗಳ ಬಿಟ್ಟು ಸಂಘಟಿತವಾಗಿ ಹೋರಾಟ ಮಾಡುವುದನ್ನು ರೂಢಿಸಿಕೊಳ್ಳಬೇಕು ಎಂದರು.</p>.<p>ಗ್ರಾಮಾಂತರ ಜಿಲ್ಲಾ ಬಡಗನಾಡು ಬ್ರಾಹ್ಮಣ ಸಂಘದ ಉಪಾಧ್ಯಕ್ಷ ಹೊಸಕೋಟೆ ಮಂಜುನಾಥ ಮಾತನಾಡಿ, ಸಮುದಾಯದ ಏಳಿಗೆಗಾಗಿ ಶ್ರಮಿಸುತ್ತಿರುವ ವೆಂಕಟನಾರಾಯಣ ಅವರು ಸಂಘಟನೆಯಲ್ಲಿ ಮುಖ್ಯ ಪಾತ್ರವಹಿಸಿದ್ದಾರೆ ಅವರನ್ನು ಬೆಂಬಲಿಸಬೇಕಾಗಿದೆ ಎಂದರು.</p>.<p>ರಾಜ್ಯ ಕಾರ್ಯಕಾರಣಿ ಸಮಿತಿಯ ಸದಸ್ಯರಾದ ವಿಶ್ವನಾಥ್, ಮಂಜುನಾಥ್ ಶರ್ಮಾ, ದೇವನಹಳ್ಳಿ ತಾಲ್ಲೂಕು ಬ್ರಾಹ್ಮಣ ಮಹಾಸಭಾ ಅದ್ಯಕ್ಷ ದೇ.ಸೂ.ನಾಗರಾಜು, ಉಪಾಧ್ಯಕ್ಷ ದೀಕ್ಷಿತ್, ವಿಜಯಪುರ ಬ್ರಾಹ್ಮಣ ಸೇವಾ ಟ್ರಸ್ಟ್ ಅಧ್ಯಕ್ಷ ಮುರುಳಿ ಭಟ್ಟಾಚಾರ್ಯ, ಉಪಾದ್ಯಕ್ಷ ಎಚ್.ಆರ್.ಶೇಷಗಿರಿರಾವ್, ಎಸ್. ರವಿ, ಜಿ.ಸತೀಶಕುಮಾರ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>