ಗುಂಡ್ಲುಪೇಟೆ: ಸೋಮವಾರ ರಾತ್ರಿ ತಾಲ್ಲೂಕಿನಾದ್ಯಂತ ಉತ್ತಮ ಮಳೆಯಾದ್ದರಿಂದ ಹಲವು ಗ್ರಾಮಗಳಲ್ಲಿ ಹಾನಿಯುಂಟಾಗಿದೆ.ತಾಲ್ಲೂಕಿನ ಮಗುವಿನಹಳ್ಳಿ ಗ್ರಾಮದಲ್ಲಿ ಶಾಲೆಯ ಅಡುಗೆ ಮನೆಗೆ ಹೆಚ್ಚಿನ ಪ್ರಮಾಣದಲ್ಲಿ ನೀರು ನುಗ್ಗಿ ತೊಂದರೆಯಾಗಿದೆ. ಮಂಗಳವಾರ ಬೆಳಿಗ್ಗೆ ಅಡುಗೆ ಮಾಡುವ ಸಿಬ್ಬಂದಿ ನೀರನ್ನೆಲ್ಲ ಹೊರ ಚೆಲ್ಲಿದರು.ಬಲಚಲವಾಡಿ ಗ್ರಾಮದಲ್ಲಿ ಕಟಾವಿಗೆ ಬಂದಿದ್ದ ಬಾಳೆ ಬೆಳೆ ನಾಶವಾಗಿದೆ. ಗ್ರಾಮದ ಶಂಕರಪ್ಪ ಅವರ ಜಮೀನಿನಲ್ಲಿ ನೂರಕ್ಕು ಹೆಚ್ಚು ಬಾಳೆ ನೆಲಕ್ಕುರುಳಿದೆ.‘ಸುಮಾರು ಒಂದು ₹1 ಲಕ್ಷ ನಷ್ಟವಾಗಿದೆ, ನಷ್ಟ ಅನುಭವಿಸಿದ ರೈತರಿಗೆ ಪರಿಹಾರ ನೀಡಬೇಕು’ ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.ಪಟ್ಟಣದ ಮಾಡ್ರಹಳ್ಳಿ ವೃತ್ತದಲ್ಲಿ ಮಳೆಯಿಂದ ನೀರು ನಿಂತಿದ್ದರಿಂದ ಮಂಗಳವಾರ ಸಾರ್ವಜನಿಕರ ಸಂಚಾರಕ್ಕೆ ತೊಂದರೆಯಾಯಿತು.