ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್.ಮುನಿಯಪ್ಪ ಆಪ್ತ ಕಾರ್ಯದರ್ಶಿ ಪತ್ನಿಯಾಗಿರುವ ಅನುರಾಧ, ಸಚಿವರ ಸಂಬಂಧಿಯೂ ಆಗಿದ್ದಾರೆ. ಅವರು ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಪರ ಅಧಿಕಾರಿಗಳು ಕೆಲಸ ಮಾಡುವಂತೆ ಒತ್ತಡ ಹೇರುತ್ತಿದ್ದಾರೆ ಎಂದು ಆರೋಪಿಸಿ ಯಲಹಂಕದ ವಕೀಲ ಜಿ.ಎನ್.ವೆಂಕಟರಮಣಪ್ಪ ದೂರು ನೀಡಿದ್ದಾರೆ.