ಪೌರಾಡಳಿತ ಸಚಿವರು ಜಿಲ್ಲೆಯವರಾಗಿದ್ದರೂ ಇಲ್ಲಿ ಆಡಳಿತ ನಡೆಸುತ್ತಿರುವವರು, ಸಚಿವರನ್ನು ಭೇಟಿ ಮಾಡಿ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿ, ಶತಮಾನೋತ್ಸವಕ್ಕೆ ವಿಶೇಷ ಅನುದಾನ ಬಿಡುಗಡೆ ಮಾಡಿಸಿಕೊಳ್ಳಲು ಸಾಧ್ಯವಾಗಿಲ್ಲ. ಜಿಲ್ಲಾ ಉಸ್ತುವಾರಿ ಸಚಿವ ರಾಗಲಿ, ಶಾಸಕರಾಗಲಿ ಪುರಸಭೆಯಲ್ಲಿ ಇದುವರೆಗೂ ಸಭೆ ಕರೆದು ಇಲ್ಲಿನ ಅಭಿವೃದ್ಧಿ ಕುರಿತು ಮಾಹಿತಿ ಪಡೆದು ಕೊಂಡಿಲ್ಲ ಎಂದು ನಾಗರಿಕರು ಬೇಸರ ವ್ಯಕ್ತಪಡಿಸಿದರು.