<p><strong>ದೇವನಹಳ್ಳಿ: </strong>‘ಗ್ರಾಮೀಣ ಭಾಗದ ರಸ್ತೆಗಳು ಅಭಿವೃದ್ಧಿಯಾದರೆ ಗ್ರಾಮಗಳು ಸರ್ವತೋಮುಖ ಅಭಿವೃದ್ಧಿಯಾಗುತ್ತವೆ. ಪ್ರತಿ ಗ್ರಾಮದಲ್ಲೂ ಅಭಿವೃದ್ಧಿ ಕಾರ್ಯಗಳಿಗೆ ಹೆಚ್ಚಿನ ಒತ್ತು ನೀಡಲಾಗುತ್ತಿದೆ’ ಎಂದು ಶಾಸಕ ನಿಸರ್ಗ ನಾರಾಯಣಸ್ವಾಮಿ ತಿಳಿಸಿದರು.</p>.<p>ತಾಲ್ಲೂಕಿನ ಕುಂದಾಣ ಹೋಬಳಿಯ ಆಲೂರು ಗ್ರಾಮದಲ್ಲಿ ಕಾಂಕ್ರೀಟ್ ರಸ್ತೆ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿದರು.</p>.<p>ತಾಲ್ಲೂಕಿನ ಸಮಗ್ರ ಅಭಿವೃದ್ಧಿಗೆ ಒತ್ತು ನೀಡಲಾಗಿದೆ. ಈ ಹಿಂದೆ ಶಾಸಕರು ಗ್ರಾಮಗಳಲ್ಲಿ ₹ 5 ಲಕ್ಷದಿಂದ ₹ 10 ಲಕ್ಷ ಮೊತ್ತದ ಕಾಮಗಾರಿ ಮಾಡುತ್ತಿದ್ದರು. ಇದೀಗ ಒಂದು ಗ್ರಾಮಕ್ಕೆ ₹ 50 ಲಕ್ಷದಿಂದ ₹ 1 ಕೋಟಿ ವೆಚ್ಚದಡಿ ಕಾಂಕ್ರೀಟ್ ರಸ್ತೆ ಮಾಡಿಸಲಾಗುತ್ತಿದೆ ಎಂದರು.</p>.<p>‘ತಾಲ್ಲೂಕಿನ ಅಭಿವೃದ್ಧಿಯೇ ನನ್ನ ಗುರಿ. ಗುಣಮಟ್ಟದ ರಸ್ತೆಗಳನ್ನು ಸಾರ್ವಜನಿಕರ ಉಪಯೋಗಕ್ಕೆ ನೀಡಬೇಕು. ಈ ಬಗ್ಗೆ ಗುತ್ತಿಗೆದಾರರಿಗೆ ತಿಳಿಸಲಾಗಿದೆ. ಗುಣಮಟ್ಟದಲ್ಲಿ ಯಾವುದೇ ರಾಜಿ ಇಲ್ಲ. ಚುನಾವಣಾ ನೀತಿಸಂಹಿತೆ ಜಾರಿಯಾಗುವುದರಿಂದ ಗ್ರಾಮಗಳಲ್ಲಿ ಅಭಿವೃದ್ಧಿ ಕೆಲಸಗಳು ತ್ವರಿತವಾಗಿ ನಡೆಯಲಿ. ಬಿದಲೂರು, ಪಂಡಿತಪುರ, ಸುಣ್ಣಘಟ್ಟ, ಆಲೂರು, ಕೊಯಿರ ಗ್ರಾಮದಲ್ಲಿ ಕಾಂಕ್ರೀಟ್ ರಸ್ತೆ ನಿರ್ಮಾಣಕ್ಕೆ ಚಾಲನೆ ನೀಡಲಾಗಿದೆ ಎಂದು ಹೇಳಿದರು.</p>.<p>ಆಲೂರು ಗ್ರಾಮದಲ್ಲಿ ₹ 20 ಲಕ್ಷ ವೆಚ್ಚದಲ್ಲಿ ಕಾಂಕ್ರೀಟ್ ರಸ್ತೆ ನಿರ್ಮಾಣವಾಗುತ್ತಿದೆ. ಗ್ರಾಮಸ್ಥರು ಮುಂದೆ ನಿಂತು ಗುಣಮಟ್ಟದ ಕಾಮಗಾರಿ ಮಾಡಿಸಿಕೊಳ್ಳಬೇಕು ಎಂದರು.</p>.<p>ಗ್ರಾ.ಪಂ. ಅಧ್ಯಕ್ಷೆ ಗೌರಮ್ಮ ರಾಮಣ್ಣ, ಉಪಾಧ್ಯಕ್ಷೆ ಕಾಂತ ಮುನಿರಾಜು, ಸದಸ್ಯರಾದ ರಘು, ಅಂಬಿಕಾ, ಜಯಲಕ್ಷ್ಮಮ್ಮ ಮುನಿರಾಜು, ಮಾಜಿ ಅಧ್ಯಕ್ಷರಾದ ಮುನೇಗೌಡ, ರಾಜಣ್ಣ, ಮಾಜಿ ಸದಸ್ಯ ಕದಿರಪ್ಪ, ಮುನಿಆಂಜಿನಪ್ಪ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದೇವನಹಳ್ಳಿ: </strong>‘ಗ್ರಾಮೀಣ ಭಾಗದ ರಸ್ತೆಗಳು ಅಭಿವೃದ್ಧಿಯಾದರೆ ಗ್ರಾಮಗಳು ಸರ್ವತೋಮುಖ ಅಭಿವೃದ್ಧಿಯಾಗುತ್ತವೆ. ಪ್ರತಿ ಗ್ರಾಮದಲ್ಲೂ ಅಭಿವೃದ್ಧಿ ಕಾರ್ಯಗಳಿಗೆ ಹೆಚ್ಚಿನ ಒತ್ತು ನೀಡಲಾಗುತ್ತಿದೆ’ ಎಂದು ಶಾಸಕ ನಿಸರ್ಗ ನಾರಾಯಣಸ್ವಾಮಿ ತಿಳಿಸಿದರು.</p>.<p>ತಾಲ್ಲೂಕಿನ ಕುಂದಾಣ ಹೋಬಳಿಯ ಆಲೂರು ಗ್ರಾಮದಲ್ಲಿ ಕಾಂಕ್ರೀಟ್ ರಸ್ತೆ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿದರು.</p>.<p>ತಾಲ್ಲೂಕಿನ ಸಮಗ್ರ ಅಭಿವೃದ್ಧಿಗೆ ಒತ್ತು ನೀಡಲಾಗಿದೆ. ಈ ಹಿಂದೆ ಶಾಸಕರು ಗ್ರಾಮಗಳಲ್ಲಿ ₹ 5 ಲಕ್ಷದಿಂದ ₹ 10 ಲಕ್ಷ ಮೊತ್ತದ ಕಾಮಗಾರಿ ಮಾಡುತ್ತಿದ್ದರು. ಇದೀಗ ಒಂದು ಗ್ರಾಮಕ್ಕೆ ₹ 50 ಲಕ್ಷದಿಂದ ₹ 1 ಕೋಟಿ ವೆಚ್ಚದಡಿ ಕಾಂಕ್ರೀಟ್ ರಸ್ತೆ ಮಾಡಿಸಲಾಗುತ್ತಿದೆ ಎಂದರು.</p>.<p>‘ತಾಲ್ಲೂಕಿನ ಅಭಿವೃದ್ಧಿಯೇ ನನ್ನ ಗುರಿ. ಗುಣಮಟ್ಟದ ರಸ್ತೆಗಳನ್ನು ಸಾರ್ವಜನಿಕರ ಉಪಯೋಗಕ್ಕೆ ನೀಡಬೇಕು. ಈ ಬಗ್ಗೆ ಗುತ್ತಿಗೆದಾರರಿಗೆ ತಿಳಿಸಲಾಗಿದೆ. ಗುಣಮಟ್ಟದಲ್ಲಿ ಯಾವುದೇ ರಾಜಿ ಇಲ್ಲ. ಚುನಾವಣಾ ನೀತಿಸಂಹಿತೆ ಜಾರಿಯಾಗುವುದರಿಂದ ಗ್ರಾಮಗಳಲ್ಲಿ ಅಭಿವೃದ್ಧಿ ಕೆಲಸಗಳು ತ್ವರಿತವಾಗಿ ನಡೆಯಲಿ. ಬಿದಲೂರು, ಪಂಡಿತಪುರ, ಸುಣ್ಣಘಟ್ಟ, ಆಲೂರು, ಕೊಯಿರ ಗ್ರಾಮದಲ್ಲಿ ಕಾಂಕ್ರೀಟ್ ರಸ್ತೆ ನಿರ್ಮಾಣಕ್ಕೆ ಚಾಲನೆ ನೀಡಲಾಗಿದೆ ಎಂದು ಹೇಳಿದರು.</p>.<p>ಆಲೂರು ಗ್ರಾಮದಲ್ಲಿ ₹ 20 ಲಕ್ಷ ವೆಚ್ಚದಲ್ಲಿ ಕಾಂಕ್ರೀಟ್ ರಸ್ತೆ ನಿರ್ಮಾಣವಾಗುತ್ತಿದೆ. ಗ್ರಾಮಸ್ಥರು ಮುಂದೆ ನಿಂತು ಗುಣಮಟ್ಟದ ಕಾಮಗಾರಿ ಮಾಡಿಸಿಕೊಳ್ಳಬೇಕು ಎಂದರು.</p>.<p>ಗ್ರಾ.ಪಂ. ಅಧ್ಯಕ್ಷೆ ಗೌರಮ್ಮ ರಾಮಣ್ಣ, ಉಪಾಧ್ಯಕ್ಷೆ ಕಾಂತ ಮುನಿರಾಜು, ಸದಸ್ಯರಾದ ರಘು, ಅಂಬಿಕಾ, ಜಯಲಕ್ಷ್ಮಮ್ಮ ಮುನಿರಾಜು, ಮಾಜಿ ಅಧ್ಯಕ್ಷರಾದ ಮುನೇಗೌಡ, ರಾಜಣ್ಣ, ಮಾಜಿ ಸದಸ್ಯ ಕದಿರಪ್ಪ, ಮುನಿಆಂಜಿನಪ್ಪ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>