‘ಜಮೀನಿನಲ್ಲಿ ಜೋಳ ಬೆಳೆದಿದ್ದೇವೆ. ಮಳೆಯಿಂದ ಬೆಳೆ ಹಾಳಾಗಿದ್ದು, ದನ, ಕರುಗಳಿಗೆ ಕಟಾವು ಮಾಡಿಕೊಂಡು ಹೋಗುವಂತೆ ರೈತರಿಗೆ ಉಚಿತವಾಗಿ ಕೊಟ್ಟಿದ್ದೇವೆ. ಶುಕ್ರವಾರ ದನ, ಕರುಗಳಿಗೆ ಜೋಳ ಕಟಾವು ಮಾಡುವಾಗ ಮುನಿಕೃಷ್ಣಪ್ಪ ಹಾಗೂ ಅವರ ಸಹಚರರು ಏಕಾಏಕಿ ದೊಣ್ಣೆಗಳನ್ನು ಹಿಡಿದು ಕಟಾವು ಮಾಡುತ್ತಿದ್ದವರನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆ ಮಾಡಲು ಮುಂದಾಗಿದ್ದರು. ಅವರನ್ನು ತಡೆಯಲು ಹೋದಾಗ ನಮ್ಮ ಕುಟುಂಬದವರ ಮೇಲೆ ಹಲ್ಲೆ ನಡೆಸಿದ್ದಾರೆ’ ಎಂದು ಶಶಿಧರ್ ಎಂಬುವರು ಪೊಲೀಸರಿಗೆ ದೂರು ನೀಡಿದ್ದಾರೆ.