<p><strong>ದೇವನಹಳ್ಳಿ</strong>: ಕಾಂಗ್ರೆಸ್ ಅಭ್ಯರ್ಥಿಯಾಗಿ ಕೆ.ಚ್.ಮುನಿಯಪ್ಪ ಅವರನ್ನು ಘೋಷಣೆ ಮಾಡಿದ ನಂತರ ಅವರ ವಿರುದ್ಧ ಸ್ಪರ್ಧೆ ಮಾಡುವುದಿಲ್ಲ ಎಂಬ ಸಾಕಷ್ಟು ವದಂತಿ ಹರಿದಾಡುತ್ತಿದೆ. ಇದಕ್ಕೆ ಯಾವುದೇ ಕಾರ್ಯಕರ್ತರು, ಮತದಾರರು ಗೊಂದಲಕ್ಕೆ ಒಳಗಾಗಬಾರದು ಎಂದು ಮಾಜಿ ಶಾಸಕ ಪಿಳ್ಳಮುನಿಶಾಮಪ್ಪ ತಿಳಿಸಿದರು.</p>.<p>ಪಟ್ಟಣದಲ್ಲಿ ಸುದ್ದಿಗೋಷ್ಠಿಯಲ್ಲು ಮಾತನಾಡಿದ ಅವರು, 'ಕೇಂದ್ರದ ಮಾಜಿ ಸಚಿವ ಕೆ.ಎಚ್.ಮುನಿಯಪ್ಪ ಅವರ ಬಗ್ಗೆ ಗೌರವವಿದೆ. ನಾವಿಬ್ಬರೂ ಒಂದೇ ಸಮುದಾಯದವರು. ಆದರೆ, ಸ್ಪರ್ಧೆಯಿಂದ ವಿಮುಖನಾಗುವುದಿಲ್ಲ‘ ಎಂದರು.</p>.<p>'ಒಂದೇ ಸಮುದಾಯದವರು ಎಂದ ಮಾತ್ರಕ್ಕೆ ಪ್ರಜಾಪ್ರಭುತ್ವದಲ್ಲಿ ಚುನಾವಣೆಗೆ ಸ್ಪರ್ಧಿಸಬಾರದು ಎಂಬ ಯಾವುದೇ ಕಾನೂನು ಇಲ್ಲ. ಹೈಕಮಾಂಡ್ ಸೂಚಿಸಿದರೆ ಬಿಜೆಪಿಯಿಂದ ಸ್ಪರ್ಧಿಸಲು ಬದ್ಧನಾಗಿದ್ದೇನೆ' ಎಂದರು.</p>.<p>'ಪಕ್ಷ ಸೆರ್ಪಡೆಯಾಗುವ ಮುನ್ನ ಪಕ್ಷದ ವರಿಷ್ಠರು ಟಿಕೆಟ್ ನೀಡುವ ಭರವಸೆ ನೀಡಿದ್ದಾರೆ. ಶೇ 100ರಷ್ಟು ಬಿಜೆಪಿ ಟಿಕೆಟ್ ನೀಡುವ ವಿಶ್ವಾಸವಿದೆ. ಈಗಾಗಲೇ ಕ್ಷೇತ್ರದಲ್ಲಿ ಪ್ರವಾಸ ಮಾಡುತ್ತಿದ್ದೇನೆ. ನಾನು ಶಾಸಕನಾಗಿ ಮಾಡಿದ್ಧ ಅಭಿವೃದ್ಧಿ ಕಾರ್ಯಗಳೇ ಶ್ರೀರಕ್ಷೆಯಾಗಲಿದೆ' ಎಂದು ವಿಶ್ವಾಸ ವ್ಯಕ್ತಪಡಿಸಿದರು.</p>.<p>ಬೈಯಪ್ಪ ಮಾಜಿ ಅಧ್ಯಕ್ಷ ಎಸ್ಎಲ್ಎನ್ ಅಶ್ವತ್ಥ್ ನಾರಾಯಣ್, ತಾ.ಪಂ ಮಾಜಿ ಉಪಾಧ್ಯಕ್ಷ ಎಸ್.ಎಂ.ನಾರಾಯಣಸ್ವಾಮಿ, ಪುರಸಭೆ ಸದಸ್ಯ ಬಾಂಬೆ ನಾರಾಯಣಸ್ವಾಮಿ, ರಾಜ್ಯ ಪರಿಷತ್ ಸದಸ್ಯ ದೇ.ಸು.ನಾಗರಾಜ್, ಟೌನ್ ಬಿಜೆಪಿ ಅಧ್ಯಕ್ಷ ಸಂದೀಪ್, ಕಾರ್ಯಕರ್ತರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದೇವನಹಳ್ಳಿ</strong>: ಕಾಂಗ್ರೆಸ್ ಅಭ್ಯರ್ಥಿಯಾಗಿ ಕೆ.ಚ್.ಮುನಿಯಪ್ಪ ಅವರನ್ನು ಘೋಷಣೆ ಮಾಡಿದ ನಂತರ ಅವರ ವಿರುದ್ಧ ಸ್ಪರ್ಧೆ ಮಾಡುವುದಿಲ್ಲ ಎಂಬ ಸಾಕಷ್ಟು ವದಂತಿ ಹರಿದಾಡುತ್ತಿದೆ. ಇದಕ್ಕೆ ಯಾವುದೇ ಕಾರ್ಯಕರ್ತರು, ಮತದಾರರು ಗೊಂದಲಕ್ಕೆ ಒಳಗಾಗಬಾರದು ಎಂದು ಮಾಜಿ ಶಾಸಕ ಪಿಳ್ಳಮುನಿಶಾಮಪ್ಪ ತಿಳಿಸಿದರು.</p>.<p>ಪಟ್ಟಣದಲ್ಲಿ ಸುದ್ದಿಗೋಷ್ಠಿಯಲ್ಲು ಮಾತನಾಡಿದ ಅವರು, 'ಕೇಂದ್ರದ ಮಾಜಿ ಸಚಿವ ಕೆ.ಎಚ್.ಮುನಿಯಪ್ಪ ಅವರ ಬಗ್ಗೆ ಗೌರವವಿದೆ. ನಾವಿಬ್ಬರೂ ಒಂದೇ ಸಮುದಾಯದವರು. ಆದರೆ, ಸ್ಪರ್ಧೆಯಿಂದ ವಿಮುಖನಾಗುವುದಿಲ್ಲ‘ ಎಂದರು.</p>.<p>'ಒಂದೇ ಸಮುದಾಯದವರು ಎಂದ ಮಾತ್ರಕ್ಕೆ ಪ್ರಜಾಪ್ರಭುತ್ವದಲ್ಲಿ ಚುನಾವಣೆಗೆ ಸ್ಪರ್ಧಿಸಬಾರದು ಎಂಬ ಯಾವುದೇ ಕಾನೂನು ಇಲ್ಲ. ಹೈಕಮಾಂಡ್ ಸೂಚಿಸಿದರೆ ಬಿಜೆಪಿಯಿಂದ ಸ್ಪರ್ಧಿಸಲು ಬದ್ಧನಾಗಿದ್ದೇನೆ' ಎಂದರು.</p>.<p>'ಪಕ್ಷ ಸೆರ್ಪಡೆಯಾಗುವ ಮುನ್ನ ಪಕ್ಷದ ವರಿಷ್ಠರು ಟಿಕೆಟ್ ನೀಡುವ ಭರವಸೆ ನೀಡಿದ್ದಾರೆ. ಶೇ 100ರಷ್ಟು ಬಿಜೆಪಿ ಟಿಕೆಟ್ ನೀಡುವ ವಿಶ್ವಾಸವಿದೆ. ಈಗಾಗಲೇ ಕ್ಷೇತ್ರದಲ್ಲಿ ಪ್ರವಾಸ ಮಾಡುತ್ತಿದ್ದೇನೆ. ನಾನು ಶಾಸಕನಾಗಿ ಮಾಡಿದ್ಧ ಅಭಿವೃದ್ಧಿ ಕಾರ್ಯಗಳೇ ಶ್ರೀರಕ್ಷೆಯಾಗಲಿದೆ' ಎಂದು ವಿಶ್ವಾಸ ವ್ಯಕ್ತಪಡಿಸಿದರು.</p>.<p>ಬೈಯಪ್ಪ ಮಾಜಿ ಅಧ್ಯಕ್ಷ ಎಸ್ಎಲ್ಎನ್ ಅಶ್ವತ್ಥ್ ನಾರಾಯಣ್, ತಾ.ಪಂ ಮಾಜಿ ಉಪಾಧ್ಯಕ್ಷ ಎಸ್.ಎಂ.ನಾರಾಯಣಸ್ವಾಮಿ, ಪುರಸಭೆ ಸದಸ್ಯ ಬಾಂಬೆ ನಾರಾಯಣಸ್ವಾಮಿ, ರಾಜ್ಯ ಪರಿಷತ್ ಸದಸ್ಯ ದೇ.ಸು.ನಾಗರಾಜ್, ಟೌನ್ ಬಿಜೆಪಿ ಅಧ್ಯಕ್ಷ ಸಂದೀಪ್, ಕಾರ್ಯಕರ್ತರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>