ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜನರ ದಿಕ್ಕು ತಪ್ಪಿಸುವ ಕಾಂಗ್ರೆಸ್‌, ಬಿಜೆಪಿ: ಬಂಗಾರಪ್ಪ

Last Updated 9 ಏಪ್ರಿಲ್ 2019, 13:26 IST
ಅಕ್ಷರ ಗಾತ್ರ

ವಿಜಯಪುರ: ಪ್ರತಿ ಚುನಾವಣೆಯಲ್ಲೂ ಜನರ ದಿಕ್ಕು ತಪ್ಪಿಸುವ ಕಾಂಗ್ರೆಸ್, ಬಿಜೆಪಿ ನಂಬದೆ ಬಿಎಸ್‌ಪಿಗೆ ಮತ ನೀಡುವಂತೆ ತಾಲ್ಲೂಕು ಘಟಕದ ಅಧ್ಯಕ್ಷ ಬಂಗಾರಪ್ಪ ಮನವಿ ಮಾಡಿದರು.

ಹೋಬಳಿ ವೆಂಕಟೇನಹಳ್ಳಿ ಗ್ರಾಮದಲ್ಲಿ ಬಿಎಸ್‌ಪಿ ಅಭ್ಯರ್ಥಿ ಸಿ.ಎಸ್.ದ್ವಾರಕಾನಾಥ್ ಪರವಾಗಿ ಮತಯಾಚಿಸಿ ಮಾತನಾಡಿದರು.

ಈ ದೇಶದ ಬಡವರು, ತುಳಿಕ್ಕೆ ಒಳಗಾಗಿರುವವರು, ಆರ್ಥಿಕ ದುರ್ಬಲರ ಏಳಿಗೆಗಾಗಿ ಹುಟ್ಟಿಕೊಂಡ ಏಕೈಕ ಪಕ್ಷ ಬಹುಜನ ಸಮಾಜವಾದಿ ಪಕ್ಷ. ಮಾಯಾವತಿ ಅವರು ಪ್ರಧಾನಿಯಾಗುವ ಅವಕಾಶ ಹೊಂದಿದ್ದಾರೆ. ಅವರು ಪ್ರಧಾನಿಯಾದರೆ ದೇಶಕ್ಕೆ ಒಳ್ಳೆಯ ದಿನಗಳು ಬರಲು ಸಾಧ್ಯವಿದೆಯೇ ಹೊರತು, ಕಾಂಗ್ರೆಸ್, ಬಿಜೆಪಿಯಿಂದ ಅದು ಸಾಧ್ಯವಿಲ್ಲ. ಈ ಭಾಗದಲ್ಲಿನ ಸಮಸ್ಯೆಗಳ ಕುರಿತು ಧ್ವನಿಯೆತ್ತಲು ಚಿಂತಕ, ವಕೀಲ ದ್ವಾರಕಾನಾಥ್ ಅವರಿಗೆ ಮತ ನೀಡಲು ಮನವಿ ಮಾಡಿದರು.

ಮುಖಂಡರಾದ ರವಿಕಲಾ ಮಾತನಾಡಿ, ಈ ದೇಶದ ಹೆಣ್ಣು ಮಕ್ಕಳು ನೆಮ್ಮದಿ ಜೀವನ ನಡೆಸಲು ಬಿಎಸ್‌ಪಿ ಅಧಿಕಾರಕ್ಕೆ ಬರುವುದು ಅನಿವಾರ್ಯವಾಗಿದೆ ಎಂದರು.

ಮುಖಂಡರಾದ ನಾರಾಯಣಸ್ವಾಮಿ, ನಂದಗುಂದ ವೆಂಕಟೇಶ್, ಚಪ್ಪರಕಲ್ಲು ರಾಜಣ್ಣ, ನರಸಿಂಹಮೂರ್ತಿ, ರಾಮಾಂಜಿನಪ್ಪ, ನರಸಿಂಹಯ್ಯ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT