ನೆರೆ ಸಂಭವಿಸಿ ಎರಡು ತಿಂಗಳು ಕಳೆದರೂ ಸಂತ್ರಸ್ತರ ಗೋಳು ಕೇಳುವವರಿಲ್ಲ, ಮುಂದಿನ ಚುನಾವಣೆಯಲ್ಲಿ ಸಂತ್ರಸ್ತರ ಶಾಪ ಬಿಜೆಪಿ ಪಕ್ಷಕ್ಕೆ ತಟ್ಟಲಿದೆ, ಕಾಂಗ್ರೆಸ್ ನಾಯಕರ ಮೇಲೆ ಮತ್ತೆ ದಾಳಿ ನಡೆದರೆ ವಿಧಾನಸೌಧ ಮುತ್ತಿಗೆ ಹಾಕಲಾಗುವುದು ಎಂದು ಎಚ್ಚರಿಕೆ ನೀಡಿದರು. ಚಲವಾದಿ ಮಹಾಸಭಾ ತಾಲ್ಲೂಕು ಘಟಕ ಅಧ್ಯಕ್ಷ ಕೆ.ವಿ. ಸ್ವಾಮಿ, ಗ್ರಾಮ ಪಂಚಾಯಿತಿ ಸದಸ್ಯ ಸೋಮಶೇಖರ್, ಮುಖಂಡರಾದ ಮುನಿರಾಜು, ಶ್ರೀನಿವಾಸ್ ಗಾಂಧಿ ಇದ್ದರು.