<p><strong>ಹೊಸಕೋಟೆ: </strong>ಕೆಂದ್ರದಲ್ಲಿ ವಿರೋಧ ಪಕ್ಷದಲ್ಲಿ ಕೂರಲೂ ಸ್ಥಾನವಿಲ್ಲದ ಕಾಂಗ್ರೆಸ್ ಈಗ ದೇಶದ ಅಭಿವೃದ್ಧಿಗೆ ಪೂರಕವಾದ ಸಿಎಎ ವಿಚಾರದಲ್ಲಿ ಜನರಿಗೆ ತಪ್ಪು ಮಾಹಿತಿ ನೀಡಿ ವಿನಾಕಾರಣ ದೇಶದಲ್ಲಿ ಅಶಾಂತಿ ಹುಟ್ಟುಹಾಕುತ್ತಿದೆ ಎಂದು ಬಿಜೆಪಿ ಮುಖಂಡರಾದ ಮಾಳವಿಕಾ ಅವಿನಾಶ್ ಆರೋಪಿಸಿದರು.</p>.<p>ಅವರು ನಗರದಲ್ಲಿ ಹೊಸಕೋಟೆ ನಾಗರಿಕ ವೇದಿಕೆ ಹಮ್ಮಿಕೊಂಡಿದ್ದ ‘ಸಿಎಎ ತಿದ್ದುಪಡಿ ಕಾಯ್ದೆಯ ಜನಜಾಗೃತಿ’ ಕಾರ್ಯಕ್ರಮದಲ್ಲಿ ಮಾತನಾಡುತ್ತಿದ್ದರು.</p>.<p>ಪೌರತ್ವ ತಿದ್ದುಪಡಿ ಕಾಯ್ದೆಯನ್ನು (ಸಿಎಎ) ಬಿಜೆಪಿ ತರಲಿಲ್ಲ. ಅದು ಕೇವಲ ಸಣ್ಣ ತಿದ್ದುಪಡಿಯನ್ನಷ್ಟೇ ಮಾಡಿದೆ. ಆದರೂ, ದೇಶದಲ್ಲಿ ದೊಡ್ಡ ಹೋರಾಟವನ್ನು ಜನರಿಂದ ಮಾಡಿಸುತ್ತಿದ್ದಾರೆ. ಈ ಕಾನೂನಿನಿಂದ ಈಗಾಗಲೇ ಹತ್ತಾರು ವರ್ಷದಿಂದ ಭಾರತದಲ್ಲಿರುವ ಜನರಿಗೆ ಏನೂ ತೊಂದರೆಯಿಲ್ಲ ಎಂದರು.</p>.<p>ಈ ದೇಶಕ್ಕೆ ಬಂದಿರುವ ನಿರಾಶ್ರಿತರಾಗಿ ಬಂದಿರುವ ಅಕ್ಕ ಪಕ್ಕದ ದೇಶಗಳ ಅಲ್ಲಿನ ಅಲ್ಪಸಂಖ್ಯಾತರಿಗೆ ಮಾನವೀಯತೆ ದೃಷ್ಟಿಯಿಂದ 11 ವರ್ಷದ ಬದಲಾಗಿ 6 ವರ್ಷಕ್ಕೆ ಇಲ್ಲಿನ ಪೌರತ್ವವನ್ನು ಕೊಡುವ ತಿದ್ದುಪಡಿಯನ್ನಷ್ಟೇ ಮಾಡಲಾಗಿದೆ. ಆದರೂ, ವಿನಾಕಾರಣ ಜನರಲ್ಲಿ ಗೊಂದಲ ಸೃಷ್ಟಿ ಮಾಡುತ್ತಿರುವ ಕಾಂಗ್ರೆಸ್ ಕ್ರಮ ಖಂಡನೀಯ ಎಂದರು.</p>.<p>ಈ ಕಾನೂನಿನಿಂದ ಇಲ್ಲಿ ನೂರಾರು ವರ್ಷಗಳಿಂದ ವಾಸವಾಗಿರುವ ಮುಸ್ಲಿಮರು ಸೇರಿ ಯಾರಿಗೂ ಸಮಸ್ಯೆಯಿಲ್ಲ ಎಂದು ನೂರಾರು ಬಾರಿ ಪ್ರಧಾನ ಮಂತ್ರಿ ಹಾಗೂ ಕೇಂದ್ರ ಗೃಹ ಸಚಿವರು ಹೇಳಿದ್ದಾರೆ. ಇದು ಪೌರತ್ವ ನೀಡುವ ಕಾನೂನೇ ಹೊರತು ಪೌರತ್ವ ಕಸಿಯುವ ಕಾನೂನಲ್ಲ ಎಂದರು.</p>.<p>ಮಾಜಿ ಶಾಸಕ ಎಂ.ಟಿ.ಬಿ. ನಾಗರಾಜ್ ಮಾತನಾಡಿ, ಪೌರತ್ವ ತಿದ್ದುಪಡಿಯಿಂದ ದೇಶದಲ್ಲಿರುವ 130 ಕೋಟಿ ಭಾರತೀಯರಿಗೆ ತೊಂದರೆಯಿಲ್ಲ. ಇದನ್ನು ಇಲ್ಲಿನ ಎಲ್ಲ ಮುಸ್ಲಿಮರು ಅರ್ಥ ಮಾಡಿಕೊಳ್ಳಬೇಕು ಎಂದರು. ವೇದಿಕೆ ಮೇಲೆ ನಗರದ ವಕೀಲರಾದ ಪಿ.ಎಸ್. ಮಂಜುನಾಥ್ ಉಪಸ್ಥಿತರಿದ್ದರು.</p>.<p>ಕಾರ್ಯಕ್ರಮಕ್ಕೂ ಮೊದಲು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ವತಿಯಿಂದ ನಗರದ ವಿವಿಧ ಕಾಲೇಜು ವಿದ್ಯಾರ್ಥಿಗಳು ತಿರಂಗಾ ಧ್ವಜದ ಮೆರವಣಿಗೆ ನಡೆಸಿದರು. ಬಹುತೇಕ ವ್ಯಾಪಾರಿಗಳು ಅಂಗಡಿಗಳನ್ನು ಮುಚ್ಚಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.</p>.<p>ಮೆರವಣಿಗೆಯಲ್ಲಿ ಬ್ರಾಹ್ಮಣ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಸಚ್ಚಿದಾನಂದಮೂರ್ತಿ, ನಗರ ಬಿಜೆಪಿ ಅಧ್ಯಕ್ಷ ಜಯರಾಜ್, ಜೆಮಿನಿ ಸತೀಶ್, ವಿವಿಧ ಪಕ್ಷಗಳ ನಾಯಕರು, ಕಾರ್ಯಕರ್ತರು, ಸಾರ್ವಜನಿಕರು ಸಾವಿರಾರು ಸಂಖ್ಯೆಯಲ್ಲಿ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೊಸಕೋಟೆ: </strong>ಕೆಂದ್ರದಲ್ಲಿ ವಿರೋಧ ಪಕ್ಷದಲ್ಲಿ ಕೂರಲೂ ಸ್ಥಾನವಿಲ್ಲದ ಕಾಂಗ್ರೆಸ್ ಈಗ ದೇಶದ ಅಭಿವೃದ್ಧಿಗೆ ಪೂರಕವಾದ ಸಿಎಎ ವಿಚಾರದಲ್ಲಿ ಜನರಿಗೆ ತಪ್ಪು ಮಾಹಿತಿ ನೀಡಿ ವಿನಾಕಾರಣ ದೇಶದಲ್ಲಿ ಅಶಾಂತಿ ಹುಟ್ಟುಹಾಕುತ್ತಿದೆ ಎಂದು ಬಿಜೆಪಿ ಮುಖಂಡರಾದ ಮಾಳವಿಕಾ ಅವಿನಾಶ್ ಆರೋಪಿಸಿದರು.</p>.<p>ಅವರು ನಗರದಲ್ಲಿ ಹೊಸಕೋಟೆ ನಾಗರಿಕ ವೇದಿಕೆ ಹಮ್ಮಿಕೊಂಡಿದ್ದ ‘ಸಿಎಎ ತಿದ್ದುಪಡಿ ಕಾಯ್ದೆಯ ಜನಜಾಗೃತಿ’ ಕಾರ್ಯಕ್ರಮದಲ್ಲಿ ಮಾತನಾಡುತ್ತಿದ್ದರು.</p>.<p>ಪೌರತ್ವ ತಿದ್ದುಪಡಿ ಕಾಯ್ದೆಯನ್ನು (ಸಿಎಎ) ಬಿಜೆಪಿ ತರಲಿಲ್ಲ. ಅದು ಕೇವಲ ಸಣ್ಣ ತಿದ್ದುಪಡಿಯನ್ನಷ್ಟೇ ಮಾಡಿದೆ. ಆದರೂ, ದೇಶದಲ್ಲಿ ದೊಡ್ಡ ಹೋರಾಟವನ್ನು ಜನರಿಂದ ಮಾಡಿಸುತ್ತಿದ್ದಾರೆ. ಈ ಕಾನೂನಿನಿಂದ ಈಗಾಗಲೇ ಹತ್ತಾರು ವರ್ಷದಿಂದ ಭಾರತದಲ್ಲಿರುವ ಜನರಿಗೆ ಏನೂ ತೊಂದರೆಯಿಲ್ಲ ಎಂದರು.</p>.<p>ಈ ದೇಶಕ್ಕೆ ಬಂದಿರುವ ನಿರಾಶ್ರಿತರಾಗಿ ಬಂದಿರುವ ಅಕ್ಕ ಪಕ್ಕದ ದೇಶಗಳ ಅಲ್ಲಿನ ಅಲ್ಪಸಂಖ್ಯಾತರಿಗೆ ಮಾನವೀಯತೆ ದೃಷ್ಟಿಯಿಂದ 11 ವರ್ಷದ ಬದಲಾಗಿ 6 ವರ್ಷಕ್ಕೆ ಇಲ್ಲಿನ ಪೌರತ್ವವನ್ನು ಕೊಡುವ ತಿದ್ದುಪಡಿಯನ್ನಷ್ಟೇ ಮಾಡಲಾಗಿದೆ. ಆದರೂ, ವಿನಾಕಾರಣ ಜನರಲ್ಲಿ ಗೊಂದಲ ಸೃಷ್ಟಿ ಮಾಡುತ್ತಿರುವ ಕಾಂಗ್ರೆಸ್ ಕ್ರಮ ಖಂಡನೀಯ ಎಂದರು.</p>.<p>ಈ ಕಾನೂನಿನಿಂದ ಇಲ್ಲಿ ನೂರಾರು ವರ್ಷಗಳಿಂದ ವಾಸವಾಗಿರುವ ಮುಸ್ಲಿಮರು ಸೇರಿ ಯಾರಿಗೂ ಸಮಸ್ಯೆಯಿಲ್ಲ ಎಂದು ನೂರಾರು ಬಾರಿ ಪ್ರಧಾನ ಮಂತ್ರಿ ಹಾಗೂ ಕೇಂದ್ರ ಗೃಹ ಸಚಿವರು ಹೇಳಿದ್ದಾರೆ. ಇದು ಪೌರತ್ವ ನೀಡುವ ಕಾನೂನೇ ಹೊರತು ಪೌರತ್ವ ಕಸಿಯುವ ಕಾನೂನಲ್ಲ ಎಂದರು.</p>.<p>ಮಾಜಿ ಶಾಸಕ ಎಂ.ಟಿ.ಬಿ. ನಾಗರಾಜ್ ಮಾತನಾಡಿ, ಪೌರತ್ವ ತಿದ್ದುಪಡಿಯಿಂದ ದೇಶದಲ್ಲಿರುವ 130 ಕೋಟಿ ಭಾರತೀಯರಿಗೆ ತೊಂದರೆಯಿಲ್ಲ. ಇದನ್ನು ಇಲ್ಲಿನ ಎಲ್ಲ ಮುಸ್ಲಿಮರು ಅರ್ಥ ಮಾಡಿಕೊಳ್ಳಬೇಕು ಎಂದರು. ವೇದಿಕೆ ಮೇಲೆ ನಗರದ ವಕೀಲರಾದ ಪಿ.ಎಸ್. ಮಂಜುನಾಥ್ ಉಪಸ್ಥಿತರಿದ್ದರು.</p>.<p>ಕಾರ್ಯಕ್ರಮಕ್ಕೂ ಮೊದಲು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ವತಿಯಿಂದ ನಗರದ ವಿವಿಧ ಕಾಲೇಜು ವಿದ್ಯಾರ್ಥಿಗಳು ತಿರಂಗಾ ಧ್ವಜದ ಮೆರವಣಿಗೆ ನಡೆಸಿದರು. ಬಹುತೇಕ ವ್ಯಾಪಾರಿಗಳು ಅಂಗಡಿಗಳನ್ನು ಮುಚ್ಚಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.</p>.<p>ಮೆರವಣಿಗೆಯಲ್ಲಿ ಬ್ರಾಹ್ಮಣ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಸಚ್ಚಿದಾನಂದಮೂರ್ತಿ, ನಗರ ಬಿಜೆಪಿ ಅಧ್ಯಕ್ಷ ಜಯರಾಜ್, ಜೆಮಿನಿ ಸತೀಶ್, ವಿವಿಧ ಪಕ್ಷಗಳ ನಾಯಕರು, ಕಾರ್ಯಕರ್ತರು, ಸಾರ್ವಜನಿಕರು ಸಾವಿರಾರು ಸಂಖ್ಯೆಯಲ್ಲಿ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>