ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ದೇಶದಲ್ಲಿ ಕಾಂಗ್ರೆಸ್ ಪಕ್ಷ ಬಲಿಷ್ಠವಾಗಿದೆ. ಪಕ್ಷಕ್ಕೆ ತಳಮಟ್ಟದ ಕಾರ್ಯಕರ್ತರಲ್ಲಿನ ಪ್ರಾಮಾಣಿಕತೆಯೇ ಬಲ. ಕಾಂಗ್ರೆಸ್ ಮುಕ್ತ ಭಾರತದ ಕನಸು ಕಾಣುತ್ತಿರುವ ಬಿಜೆಪಿ; ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷದ ಶಾಸಕರಿಂದ ರಾಜೀನಾಮೆ ಕೊಡಿಸುವ ಮೂಲಕ ಉಪಚುನಾವಣೆಗೆ ಕಾರಣವಾಗಿದೆ. ಆ ಮೂಲಕ ಜನರ ಹಣ ಪೋಲು ಮಾಡುವುದರ ಜೊತೆಗೆ ವಿಶ್ವಾಸ ಕಳೆದುಕೊಂಡಿದೆ’ ಎಂದು ದೂರಿದರು.