ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

72 ಮಂದಿ ಕಾಂಗ್ರೆಸ್‌ ಕಾರ್ಯಕರ್ತರು ಜೆಡಿಎಸ್‌ಗೆ

Last Updated 7 ಜೂನ್ 2020, 15:14 IST
ಅಕ್ಷರ ಗಾತ್ರ

ದೇವನಹಳ್ಳಿ: ಪಕ್ಷದ ತತ್ವ ಸಿದ್ಧಾಂತ ಮೆಚ್ಚಿ ಅನೇಕ ಕಾಂಗ್ರೆಸ್ ಮುಖಂಡರು ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಯಾಗುತ್ತಿದ್ದಾರೆ ಎಂದು ಜೆಡಿಎಸ್ ಯುವ ಮುಖಂಡ ಬಿ.ಕೆ.ನಾರಾಯಣಸ್ವಾಮಿ ಹೇಳಿದರು.

ಇಲ್ಲಿನ ಜೆಡಿಎಸ್ ಪಕ್ಷದ ಕಚೇರಿಯಲ್ಲಿ ವೆಂಕಟಗಿರಿಕೋಟೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ 72 ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಜೆಡಿಎಸ್ ಪಕ್ಷಕ್ಕೆ ಸೇರ್ಪಡೆ ಕುರಿತು ನಡೆದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಕಾಂಗ್ರೆಸ್ ಪಕ್ಷದ ನೂತನ ರಾಜ್ಯಾಧ್ಯಕ್ಷರ ಪದವಿ ಸ್ವೀಕಾರ ಸಮಾರಂಭ ನಡೆಯುವ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದಿಂದ ಹೊರಬಂದು ಜೆಡಿಎಸ್‌ಗೆ ಬೆಂಬಲ ನೀಡುತ್ತಿರುವುದು ಪಕ್ಷ ಸಂಘಟನೆಗೆ ಮತ್ತಷ್ಟು ಬಲ ಬಂದಿದೆ ಎಂದರು.

ಶಾಸಕ ನಿಸರ್ಗ ನಾರಾಯಣಸ್ವಾಮಿ ಮಾತನಾಡಿದರು.

ಬಮೂಲ್ ನಿರ್ದೇಶಕ ಬಿ.ಶ್ರೀನಿವಾಸ್, ಜೆಡಿಎಸ್ ಜಿಲ್ಲಾ ಘಟಕ ಅಧ್ಯಕ್ಷ ಬಿ.ಮುನೇಗೌಡ, ತಾಲ್ಲೂಕು ಘಟಕ ಕಾರ್ಯಾಧ್ಯಕ್ಷ ಆರ್.ಮುನೇಗೌಡ, ಪ್ರಧಾನ ಕಾರ್ಯದರ್ಶಿ ಜಿ.ಎ.ರವೀಂದ್ರ, ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಎ.ಸಿ.ನಾಗರಾಜ್, ಮಹಿಳಾ ಘಟಕತಾಲ್ಲೂಕು ಅಧ್ಯಕ್ಷೆ ಮೀನಾಕ್ಷಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT