ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎ.ಸಿ.ಶ್ರೀನಿವಾಸ್ ಮಾತನಾಡಿ, ‘ನನ್ನನ್ನು ಸೇರಿದಂತೆ ಪಕ್ಷದಲ್ಲಿ ಸಾಕಷ್ಟು ಟಿಕೆಟ್ ಆಕಾಂಕ್ಷಿಗಳಿದ್ದಾರೆ. ಸತತ 3-4 ವರ್ಷ ಪಕ್ಷವನ್ನು ಬಲಿಷ್ಠಗೊಳ್ಳಿಸಲು ಸಾಕಷ್ಟು ಶ್ರಮ ವ್ಯಯಿಸಲಾಗಿದೆ. ರಾಷ್ಟ್ರೀಯ ನಾಯಕ ಕೆ.ಎಚ್.ಮುನಿಯಪ್ಪ ಅವರಿಗೆ ಹೈಕಮಾಂಡ್ ಟಿಕೆಟ್ ನೀಡಿ ಗೊಂದಲಕ್ಕೆ ಕಾರಣವಾಗಿದೆ. ಹಿರಿಯ ರಾಜಕೀಯ ನಾಯಕರಿಗೆ ಪಕ್ಷಕ್ಕಾಗಿ ದುಡಿಯುತ್ತಿರುವ ಸ್ಥಳೀಯರಿಗೆ ಟಿಕೆಟ್ ಬಿಟ್ಟುಕೊಡುವಂತೆ ಮನವಿ ಮಾಡಿಕೊಳ್ಳುತ್ತೇನೆ' ಎಂದರು.