ಆನೇಕಲ್: ‘ಕಲಿತ ಶಾಲೆಯ ಅಭಿವೃದ್ಧಿಗೆ ಕೊಡುಗೆ ನೀಡಿ’

ಆನೇಕಲ್: ಹಳೆಯ ವಿದ್ಯಾರ್ಥಿಗಳು ತಾವು ಕಲಿತ ಶಾಲೆಯ ಅಭಿವೃದ್ಧಿ ಬಗ್ಗೆ ಗಮನ ಹರಿಸಿದರೆ ಆ ಶಾಲೆ ಅಭಿವೃದ್ಧಿಯಾಗುತ್ತದೆ. ಈ ಮೂಲಕ ಕಲಿತ ಋಣವನ್ನು ತೀರಿಸಿದ ತೃಪ್ತಿ ವಿದ್ಯಾರ್ಥಿಗಳಿಗೆ ಬರುತ್ತದೆ ಎಂದು ಎಎಸ್ಬಿ ಪದವಿಪೂರ್ವ ಕಾಲೇಜಿನ ಪ್ರಾಚಾರ್ಯ ಮಾರ್ಟೀನ್ ತಿಳಿಸಿದರು.
ಎಎಸ್ಬಿ ಹಳೆಯ ವಿದ್ಯಾರ್ಥಿಗಳ ಸಂಘದಿಂದ ಆಯೋಜಿಸಿದ್ದ ಕನ್ನಡ ರಾಜ್ಯೋತ್ಸವದ ಅಂಗವಾಗಿ ನಿವೃತ್ತ ಶಿಕ್ಷಕರ ಅಭಿನಂದನಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಎಎಸ್ಬಿ ಸರ್ಕಾರಿ ಪದವಿಪೂರ್ವ ಕಾಲೇಜು 50 ವರ್ಷಗಳಿಗೂ ಹೆಚ್ಚು ಹಳೆಯದಾದ ಕಾಲೇಜು ಆಗಿದೆ. ಸಾವಿರಾರು ಮಂದಿ ವ್ಯಾಸಂಗ ಮಾಡಿದ್ದಾರೆ. ಆದರೆ ಇತ್ತೀಚೆಗೆ ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಾಗಿತ್ತು. ಕಳೆದ ವರ್ಷ 230 ವಿದ್ಯಾರ್ಥಿಗಳಿದ್ದರು. ಈ ವರ್ಷ ದಾಖಲಾತಿಯಲ್ಲಿ ಹೆಚ್ಚಳವಾಗಿದ್ದು 560 ಮಂದಿ ವಿದ್ಯಾರ್ಥಿಗಳು ದಾಖಲಾಗಿದ್ದಾರೆ ಎಂದು ತಿಳಿಸಿದರು.
ಕಾಲೇಜಿನಲ್ಲಿ ಕಂಪ್ಯೂಟರ್ ಸೈನ್ಸ್ ಕೋರ್ಸ್ ಹೊಸದಾಗಿ ಪ್ರಾರಂಭವಾಗಿದ್ದು, ದಾನಿಗಳ ನೆರವಿನಿಂದ ಕಂಪ್ಯೂಟರ್ ಲ್ಯಾಬ್ ಎಂದು ತಿಳಿಸಿದರು.
ಹಳೆಯ ವಿದ್ಯಾರ್ಥಿಗಳ ಸಂಘವು ಕಾಲೇಜಿನ ಅಭಿವೃದ್ಧಿಗೆ ಕೊಡುಗೆ ನೀಡುತ್ತಿದೆ. ಶೌಚಾಲಯ ದುರಸ್ತಿ ಕಾರ್ಯ, ವಿದ್ಯಾರ್ಥಿಗಳಿಗೆ ಲೇಖನ ಸಾಮಗ್ರಿ, ಕಾಲೇಜಿಗೆ ಟಿ.ವಿ ಸೇರಿದಂತೆ ಹಲವು ಸೌಲಭ್ಯಗಳನ್ನು ನೀಡಿದೆ. ಕಳೆದ ವರ್ಷ ಅತಿಥಿ ಶಿಕ್ಷಕರೊಬ್ಬರ ವೇತನವನ್ನು ಸಂಘದಿಂದ ನೀಡಲಾಗಿದೆ. ಹಳೆಯ ವಿದ್ಯಾರ್ಥಿಗಳ ಸಂಘ ಮತ್ತು ಇಲಾಖೆಯ ನೆರವಿನಿಂದ ಕಾಲೇಜಿಗೆ ಹೆಚ್ಚಿನ ಸೌಲಭ್ಯಗಳನ್ನು ಕಲ್ಪಿಸುವ ನಿಟ್ಟಿನಲ್ಲಿ ಪ್ರಯತ್ನ ಮಾಡಲಾಗುವುದು ಎಂದು ತಿಳಿಸಿದರು.
ಎಎಸ್ಬಿ ಹಳೆಯ ವಿದ್ಯಾರ್ಥಿಗಳ ಸಂಘದ ಅಧ್ಯಕ್ಷ ಚಿನ್ನಪ್ಪ ವೈ. ಚಿಕ್ಕಹಾಗಡೆ ಮಾತನಾಡಿ, ಸಂಘದ ವತಿಯಿಂದ ಕಾಲೇಜಿನಲ್ಲಿ ಮೂಲಸೌಲಭ್ಯ ಕಲ್ಪಿಸಲು ಒತ್ತು ನೀಡಲಾಗಿದೆ. ದಾನಿಗಳ ನೆರವಿನಿಂದ ಕಟ್ಟಡ ಪುನರ್ ನವೀಕರಣ ಮಾಡಲು ಕ್ರಿಯಾಯೋಜನೆ ಸಿದ್ದಪಡಿಸಲಾಗುತ್ತಿದೆ. 120ಕ್ಕೂ ಹೆಚ್ಚು ಹಳೆಯ ವಿದ್ಯಾರ್ಥಿಗಳು ಸಂಘದ ಸದಸ್ಯರಾಗಿದ್ದು ಎಲ್ಲರೂ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ನಿವೃತ್ತ ಶಿಕ್ಷಕರಾದ ಕೆ. ಮಾದಯ್ಯ, ಟಿ.ವಿ. ನಾರಾಯಣಸ್ವಾಮಿ, ಎನ್. ಶ್ರೀನಿವಾಸ ಅವರನ್ನು ಸನ್ಮಾನಿಸಲಾಯಿತು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.