ನಿರಾಶ್ರಿತರ ಕೇಂದ್ರದಲ್ಲಿ 15ಕ್ಕೂ ಹೆಚ್ಚು ಮಂದಿ ಆಶ್ರಯ ಪಡೆದಿದ್ದಾರೆ. ಇಲ್ಲಿ ಅಡುಗೆ ಸಿಬ್ಬಂದಿ ಕೊರತೆಯಿರುವುದರಿಂದ ಕೇಂದ್ರದಲ್ಲಿ ಉಳಿದುಕೊಂಡಿರುವವರೇ ನಿತ್ಯ ಅಡುಗೆ ಮಾಡಿಕೊಳ್ಳುತ್ತಿದ್ದಾರೆ. ರಾತ್ರಿ ಘಟನೆ ನಡೆದಿದ್ದರೂ ಯಾರೂ ಕೂಡ ಆಸ್ಪತ್ರೆಗೆ ದಾಖಲು ಮಾಡಿರಲಿಲ್ಲ. ಬೆಳಿಗ್ಗೆ ಸಾರ್ವಜನಿಕರು ನಗರಸಭೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಬಳಿಕ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗಿದೆ.