ದೇವನಹಳ್ಳಿ:ಕೋವಿಡ್ ಎರಡನೇ ಅಲೆ ಆರಂಭವಾದಾಗಿನಿಂದ ಮೊದಲ ಅಲೆಗಿಂತ ಹೆಚ್ಚು ಸಾವು, ನೋವು ಸಂಭವಿಸುತ್ತಿವೆ. ಈ ಸಂಖ್ಯೆ ಕಡಿಮೆ ಮಾಡಲು ರಾಜ್ಯ ಸರ್ಕಾರ ಸಾಕಷ್ಟು ಕಾರ್ಯಕ್ರಮ ಹಮ್ಮಿಕೊಳ್ಳುತ್ತಿದ್ದು, ಜನರು ಸಹಕಾರ ನೀಡಬೇಕು. ಕೋವಿಡ್ ಮಾರ್ಗಸೂಚಿಯನ್ನು ಕಡ್ಡಾಯವಾಗಿ ಪಾಲನೆ ಮಾಡಬೇಕು’ ಎಂದು ಜಿಲ್ಲಾ ಪಂಚಾಯಿತಿಯ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಎಂ.ಆರ್. ರವಿಕುಮಾರ್ ಮನವಿ ಮಾಡಿದರು.