<p><strong>ದೇವನಹಳ್ಳಿ</strong>: ಸಹಕಾರ ಸಂಘಗಳು ರೈತರಿಗೆ ಕಾಲಕಾಲಕ್ಕೆ ಸಾಲ ಸೌಲಭ್ಯ ನೀಡಿ ರೈತರ ಬೆನ್ನೆಲುಬಾಗಿ ನಿಂತಿವೆ. ಸಹಕಾರ ಸಂಸ್ಥೆಗಳು ಬೆಳೆಯುವುದರಿಂದ ರೈತರ ಬದುಕು ಸುಧಾರಣೆಗೊಳ್ಳುತ್ತದೆ ಎಂದು ಸಚಿವ ಕೆ.ಎಚ್.ಮುನಿಯಪ್ಪ ತಿಳಿಸಿದರು.</p>.<p>ಪಟ್ಟಣದ ಖಾಸಗಿ ಸಭಾಂಗಣದಲ್ಲಿ ಶನಿವಾರ ಹಮ್ಮಿಕೊಂಡಿದ್ದ 72ನೇ ಅಖಿಲ ಭಾರತ ಸಹಕಾರ ಸಪ್ತಾಹ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಸಹಕಾರ ಸಂಘಗಳಿಂದ ರೈತರ ಅಭಿವೃದ್ಧಿ ಸಾಧ್ಯ, ಪಹಣಿ ಇದ್ದರೆ ಸಾಕು ₹3 ಲಕ್ಷ ವರೆಗೆ ಸಾಲ ಪಡೆಯಬಹುದು. ಜಿಲ್ಲೆಯ ಸಹಕಾರ ಸಂಘಗಳಿಗೆ ಸರ್ಕಾರದಿಂದ ಸಿಗಬೇಕಾದ ಸೌಲಭ್ಯಗಳನ್ನು ಒದಗಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದರು.</p>.<p>ಬೆಂಗಳೂರು ಹಾಲು ಒಕ್ಕೂಟದ ನಿರ್ದೇಶಕ ಎಸ್.ಪಿ.ಮುನಿರಾಜು, ಸಹಕಾರ ಕ್ಷೇತ್ರದಲ್ಲಿ ಗುಡಿ ಕೈಗಾರಿಕೆಗಳಿಂದ ಹಿಡಿದು ಬೃಹತ್ ಕೈಗಾರಿಕೆ ಸ್ಥಾಪಿಸಲು ಅವಕಾಶವಿದೆ. ಕೃಷಿಯನ್ನು ಉದ್ಯಮವಾಗಿ ಪರಿಗಣಿಸಿ ಕೃಷಿ ಉತ್ಪನ್ನಗಳು ಹಾಗೂ ಹೈನೋದ್ಯಮವನ್ನು ಪ್ರೋತ್ಸಾಹಿಸುವಲ್ಲಿ ಸಹಕಾರಿ ಸಂಸ್ಥೆಗಳ ಪಾತ್ರ ಹಿರಿದು ಎಂದು ತಿಳಿಸಿದರು.</p>.<p>ಇದೇ ವೇಳೆ ರಾಜ್ಯ ಸಹಕಾರಿ ರತ್ನ ಪ್ರಶಸ್ತಿ ಪುರಸ್ಕೃತ ವಿ.ಪ್ರಸನ್ನ ಕುಮಾರ್ ಅವರನ್ನು ಸತ್ಕರಿಸಲಾಯಿತು.</p>.<p>ಜಿಲ್ಲಾ ಸಹಕಾರಿ ಒಕ್ಕೂಟದ ಅಧ್ಯಕ್ಷ ಮುನಿರಾಮು, ಉಪಾಧ್ಯಕ್ಷ ಕಾರಹಳ್ಳಿ ಜಯರಾಂ, ನಿರ್ದೇಶಕ ವಿ.ಮುನಿರಾಜು, ಹಿತ್ತರಹಳ್ಳಿ ರಮೇಶ್, ಸಹಕಾರ ಇಲಾಖೆಯ ಉಪನಿಬಂಧಕ ಚಂದ್ರಶೇಖರ, ಗ್ಯಾರಂಟಿ ಅನುಷ್ಠಾನ ಸಮಿತಿಯ ತಾಲ್ಲೂಕು ಅಧ್ಯಕ್ಷ ಜಗನ್ನಾಥ ಉಪಸ್ಥಿತರಿದ್ದರು.</p>
<p><strong>ದೇವನಹಳ್ಳಿ</strong>: ಸಹಕಾರ ಸಂಘಗಳು ರೈತರಿಗೆ ಕಾಲಕಾಲಕ್ಕೆ ಸಾಲ ಸೌಲಭ್ಯ ನೀಡಿ ರೈತರ ಬೆನ್ನೆಲುಬಾಗಿ ನಿಂತಿವೆ. ಸಹಕಾರ ಸಂಸ್ಥೆಗಳು ಬೆಳೆಯುವುದರಿಂದ ರೈತರ ಬದುಕು ಸುಧಾರಣೆಗೊಳ್ಳುತ್ತದೆ ಎಂದು ಸಚಿವ ಕೆ.ಎಚ್.ಮುನಿಯಪ್ಪ ತಿಳಿಸಿದರು.</p>.<p>ಪಟ್ಟಣದ ಖಾಸಗಿ ಸಭಾಂಗಣದಲ್ಲಿ ಶನಿವಾರ ಹಮ್ಮಿಕೊಂಡಿದ್ದ 72ನೇ ಅಖಿಲ ಭಾರತ ಸಹಕಾರ ಸಪ್ತಾಹ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಸಹಕಾರ ಸಂಘಗಳಿಂದ ರೈತರ ಅಭಿವೃದ್ಧಿ ಸಾಧ್ಯ, ಪಹಣಿ ಇದ್ದರೆ ಸಾಕು ₹3 ಲಕ್ಷ ವರೆಗೆ ಸಾಲ ಪಡೆಯಬಹುದು. ಜಿಲ್ಲೆಯ ಸಹಕಾರ ಸಂಘಗಳಿಗೆ ಸರ್ಕಾರದಿಂದ ಸಿಗಬೇಕಾದ ಸೌಲಭ್ಯಗಳನ್ನು ಒದಗಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದರು.</p>.<p>ಬೆಂಗಳೂರು ಹಾಲು ಒಕ್ಕೂಟದ ನಿರ್ದೇಶಕ ಎಸ್.ಪಿ.ಮುನಿರಾಜು, ಸಹಕಾರ ಕ್ಷೇತ್ರದಲ್ಲಿ ಗುಡಿ ಕೈಗಾರಿಕೆಗಳಿಂದ ಹಿಡಿದು ಬೃಹತ್ ಕೈಗಾರಿಕೆ ಸ್ಥಾಪಿಸಲು ಅವಕಾಶವಿದೆ. ಕೃಷಿಯನ್ನು ಉದ್ಯಮವಾಗಿ ಪರಿಗಣಿಸಿ ಕೃಷಿ ಉತ್ಪನ್ನಗಳು ಹಾಗೂ ಹೈನೋದ್ಯಮವನ್ನು ಪ್ರೋತ್ಸಾಹಿಸುವಲ್ಲಿ ಸಹಕಾರಿ ಸಂಸ್ಥೆಗಳ ಪಾತ್ರ ಹಿರಿದು ಎಂದು ತಿಳಿಸಿದರು.</p>.<p>ಇದೇ ವೇಳೆ ರಾಜ್ಯ ಸಹಕಾರಿ ರತ್ನ ಪ್ರಶಸ್ತಿ ಪುರಸ್ಕೃತ ವಿ.ಪ್ರಸನ್ನ ಕುಮಾರ್ ಅವರನ್ನು ಸತ್ಕರಿಸಲಾಯಿತು.</p>.<p>ಜಿಲ್ಲಾ ಸಹಕಾರಿ ಒಕ್ಕೂಟದ ಅಧ್ಯಕ್ಷ ಮುನಿರಾಮು, ಉಪಾಧ್ಯಕ್ಷ ಕಾರಹಳ್ಳಿ ಜಯರಾಂ, ನಿರ್ದೇಶಕ ವಿ.ಮುನಿರಾಜು, ಹಿತ್ತರಹಳ್ಳಿ ರಮೇಶ್, ಸಹಕಾರ ಇಲಾಖೆಯ ಉಪನಿಬಂಧಕ ಚಂದ್ರಶೇಖರ, ಗ್ಯಾರಂಟಿ ಅನುಷ್ಠಾನ ಸಮಿತಿಯ ತಾಲ್ಲೂಕು ಅಧ್ಯಕ್ಷ ಜಗನ್ನಾಥ ಉಪಸ್ಥಿತರಿದ್ದರು.</p>