ಹೊಸಕೋಟೆ: ನಗರದ ವರದಾಪುರ ವಾರ್ಡ್ ಸರ್ಕಾರಿ ಪ್ರಾಥಮಿಕ ಶಾಲೆಯ ಶಿಕ್ಷಕಿ ಎಸ್.ಎಂ.ಲೀಲಾವತಿ ಅವರು ಕಳೆದ ಎಸ್ಎಸ್ಎಲ್ಸಿ ಪರೀಕ್ಷಾ ಸಂದರ್ಭದಲ್ಲಿ ಉತ್ತಮ ಸೇವೆ ಸಲ್ಲಿಸಿದ ಪ್ರಯುಕ್ತ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್, ಕರ್ನಾಟಕ ಇವರಿಂದ ಉತ್ತಮ ಕೊರೊನಾ ವಾರಿಯರ್ ಎಂದು ಪ್ರಶಸ್ತಿ ಪತ್ರ ವಿತರಿಸಿ ಗೌರವಿಸಲಾಯಿತು, ಇದೇ ಸಂದರ್ಭದಲ್ಲಿ ಲೀಲಾವತಿ ಅವರು ಪಿಎಂ ಕೇರ್ ನಿಧಿಗೆ ಐದು ಸಾವಿರವನ್ನು ದೇಣಿಗೆಯಾಗಿ ನೀಡಿದರು.