ಬುಧವಾರ ಬೆಳಿಗ್ಗೆ ಸ್ಥಳೀಯರು ನೀಲಗಿರಿ ತೋಪಿನತ್ತ ಹೋದಾಗ ರಕ್ತದ ಮಡುವಿನಲ್ಲಿ ಬಿದ್ದಿದ್ದ ಎರಡು ಶವಗಳನ್ನು ನೋಡಿ ಹೆಬ್ಬಗೋಡಿ ಪೊಲೀಸರಿಗೆ ಮಾಹಿತಿ ನೀಡಿದ್ದರು. ಕುಡಿದ ಅಮಲಿನಲ್ಲಿ ಜಗಳವಾಗಿ ಕೊಲೆಯಾಗಿರಬಹುದು ಎಂದು ಶಂಕಿಸಲಾಗಿದೆ. ಬೆಂಗಳೂರು ಗ್ರಾಮಾಂತರ ಎಸ್ಪಿ ಡಾ.ವಂಶಿಕೃಷ್ಣ, ಎಎಸ್ಪಿ ಲಕ್ಷ್ಮೀ ಗಣೇಶ್, ಡಿವೈಎಸ್ಪಿ ಎಂ. ಮಲ್ಲೇಶ್, ಸರ್ಕಲ್ ಇನ್ಸ್ಪೆಕ್ಟರ್ಗಳಾದ ಗೌತಮ್, ಕೆ. ವಿಶ್ವನಾಥ್, ಎಚ್.ಆರ್. ಮಹಾನಂದ ಇದ್ದರು.