ಬುಧವಾರ ಮಧ್ಯಾಹ್ನದಿಂದಲೇ ದೇವಾಲಯಕ್ಕೆ ಸಾರ್ವಜನಿಕರ ಪ್ರವೇಶ ನಿರ್ಬಂಧಿಸಲಾಗಿದೆ. ಗುರುವಾರ ಸಂಜೆ ನಂತರ ದೇವಾಲಯಕ್ಕೆ ಸ್ಯಾನಿಟೈಸರ್ ಮಾಡಲಾಗುವುದು. ಶುಕ್ರವಾರ ಬೆಳಿಗ್ಗೆಯಿಂದ ದಿನ ನಿತ್ಯದಂತೆ ಪೂಜೆ ಹಾಗೂ ಭಕ್ತಾದಿಗಳಿಗೆ ದೇವರ ದರ್ಶನ ಇರಲಿದೆ ಎಂದು ದೇವಾಲಯದ ಕಾರ್ಯನಿರ್ವಾಹಕ ಅಧಿಕಾರಿ ಕೃಷ್ಣಪ್ಪ ತಿಳಿಸಿದ್ದಾರೆ.