ಆರೋಗ್ಯ ಇಲಾಖೆಯ ಸ್ವಾಬ್ ಟೆಸ್ಟ್ ಮಾಡಿಸಿಕೊಳ್ಳಲು ಒಪ್ಪಿರಲಿಲ್ಲ. ಹಾಗಾಗಿ ಹೆಚ್ಚುವರಿ ಜಿಲ್ಲಾಧಿಕಾರಿ ಬಸವರಾಜು, ತಾಲ್ಲೂಕು ವೈದ್ಯಾಧಿಕಾರಿ ಡಾ.ವಿನಯ್, ನೋಡೆಲ್ ಅಧಿಕಾರಿ ಡಾ.ವೈಷ್ಣವಿ ಗ್ರಾಮಕ್ಕೆ ಭೇಟಿ ನೀಡಿ ಗ್ರಾಮಸ್ಥರು ಯಾವುದೇ ಆತಂಕವಿಲ್ಲದೆ ಪರೀಕ್ಷೆ ಮಾಡಿಸಿಕೊಳ್ಳಬೇಕು. ಕೊರೊನಾ ಬಗ್ಗೆ ಭಯ ಬೇಡ. ಸ್ವಚ್ಛತೆ, ಸಾಮಾಜಿಕ ಅಂತರ, ಸ್ಯಾನಿಟೈಜ್ ಬಳಕೆ ಸೇರಿದಂತೆ ಮಾರ್ಗಸೂಚಿ ಅನುಸರಿಸುವ ಮೂಲಕ ಸೋಂಕು ತಡೆಯಲು ಶ್ರಮಿಸಬೇಕು ಎಂದು ತಿಳಿಸಿದರು.