ಸಮಂದೂರು ಗ್ರಾಮ ಪಂಚಾಯಿತಿ ಸದಸ್ಯ ಅಂಬರೀಷ್ ಮಾತನಾಡಿ, ‘ಸರ್ಕಾರಿ ಆಸ್ಪತ್ರೆಯಲ್ಲಿ ಜನರ ಜೀವಗಳಿಗೆ ಬೆಲೆ ಇಲ್ಲದಂತಾಗಿದೆ. ಶವ ಗುರುತಿಸದ ಸಿಬ್ಬಂದಿ ಚಿಕಿತ್ಸೆಯನ್ನು ಎಷ್ಟರಮಟ್ಟಿಗೆ ನೀಡಿದ್ದಾರೆ ಎಂಬ ಅನುಮಾನ ಬರುತ್ತಿದೆ. ಶುಕ್ರವಾರ ರಾತ್ರಿವರೆಗೂ ಚೆನ್ನಾಗಿ ಮಾತನಾಡುತ್ತಿದ್ದ ಮಂಜುನಾಥ್ ಶನಿವಾರ ಇಲ್ಲವಾಗಿದ್ದಾರೆ. ಅವರ ಕುಟುಂಬ ದಿಕ್ಕಿಲ್ಲದಂತಾಗಿದೆ’ ಎಂದರು.