ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ದ್ರುವನಾರಾಯಣ ಅವರು ಜ್ವರ, ಉಸಿರಾಟದ ತೊಂದರೆ ಎಂದು ಆಸ್ಪತ್ರೆಗೆ ದಾಖಲಾಗಿದ್ದಾಗ ಮಗನಿಂದ ಕೊರೊನಾ ಚಿಕಿತ್ಸೆಗೆ ಅಗತ್ಯ ಇರುವ ಔಷಧಿ, ಚುಚ್ಚು ಮದ್ದನ್ನು ಹೊರಗಿನಿಂದಲೇ ತರಿಸಿಕೊಂಡಿದ್ದಾರೆ. ಅವರು ಸರ್ಕಾರಿ ಆಸ್ಪತ್ರೆಯಲ್ಲಿ ಗಂಟಲ ದ್ರವ ಪರೀಕ್ಷೆ ಮಾಡಿಸಿದ್ದರು. ಆದರೆ ಪ್ರಯೋಗಾಲಯದಿಂದ ವರದಿ ಬರುವುದು ತಡವಾಗಿ ಜ್ವರ ಬಂದಿದ್ದರಿಂದ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಾಗಿದ್ದರು. ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ದ್ರುವನಾರಾಯಣ ಅವರ ಗಂಟಲ ದ್ರವದ ಪರೀಕ್ಷಾ ವರದಿಯು ನೆಗೆಟಿವ್ ಎಂದು ಬಂದಿದೆ.