ಆಸ್ಪತ್ರೆಗಳಲ್ಲಿ ಎಲ್ಲರಿಗೂ ಚಿಕಿತ್ಸೆ ನೀಡಲು ಸಾಧ್ಯವಿಲ್ಲ. ಹೋಂ ಐಸೋಲೇಷನ್ ಮಾಡಬೇಕಾಗುತ್ತದೆ. ಕುಟುಂಬಗಳಲ್ಲಿ ಪ್ರತ್ಯೇಕ ಕೊಠಡಿಗಳಲ್ಲಿದ್ದವರು ಕೋವಿಡ್ ಕೇರ್ ಕೇಂದ್ರಗಳಲ್ಲಿ ದಾಖಲಾದರೆ ಸೋಂಕು ಹರಡುವುದನ್ನು ತಡೆಯಲು ಸಾಧ್ಯ. ಸೋಂಕಿತರಿಗೆ ಪ್ರಾಥಮಿಕ ಹಂತದಲ್ಲಿಯೇ ಸೂಕ್ತ ಚಿಕಿತ್ಸೆ ಮತ್ತು ವೈದ್ಯಕೀಯ ಸೌಲಭ್ಯ ದೊರೆಯಬೇಕು. ಹಾಗಾಗಿ ತಾಲ್ಲೂಕಿನ ಸರ್ಜಾಪುರ, ಜಿಗಣಿ, ಅತ್ತಿಬೆಲೆ, ಇಂಡ್ಲವಾಡಿ, ದೊಮ್ಮಸಂದ್ರ, ಹೆಬ್ಬಗೋಡಿ, ಬೊಮ್ಮಸಂದ್ರ, ಆನೇಕಲ್ ಸೇರಿದಂತೆ ವಿವಿಧೆಡೆ ಬಾಲಕಿಯರ ಮತ್ತು ಬಾಲಕರ ವಿದ್ಯಾರ್ಥಿ ನಿಲಯಗಳಿವೆ. ಈ ವಿದ್ಯಾರ್ಥಿ ನಿಲಯಗಳಲ್ಲಿ ಅವಶ್ಯಕ ಸೌಲಭ್ಯಗಳನ್ನು ಕಲ್ಪಿಸಿ ಕೋವಿಡ್ ಕೇರ್ ಕೇಂದ್ರಗಳನ್ನು ಪ್ರಾರಂಭಿಸಬೇಕು. ಸಮೀಪದ ಪ್ರಾಥಮಿಕ ಆರೋಗ್ಯ ಕೇಂದ್ರ ಈ ಕೇಂದ್ರದ ಉಸ್ತುವಾರಿ ವಹಿಸಿಕೊಳ್ಳುವಂತೆ ಕ್ರಮ ಕೈಗೊಳ್ಳಬೇಕು ಎಂದರು.