<p><strong>ದೇವನಹಳ್ಳಿ/ವಿಜಯಪುರ: ‘</strong>ಸರ್ಕಾರ ಕೋವಿಡ್ ನಿಯಂತ್ರಿಸುವಲ್ಲಿ ವಿಫಲವಾಗಿದೆ. ರಾಜ್ಯದ ಜನರ ರಕ್ಷಣೆಗೆ ಕಾಂಗ್ರೆಸ್ ಪಕ್ಷ ಅಣಿಯಾಗಿ ನಿಂತಿದ್ದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ಮಾರ್ಗದರ್ಶನದಲ್ಲಿ ಆರೋಗ್ಯ ರಕ್ಷಣೆಗೆ ಪಣ ತೊಟ್ಟಿದ್ದೇವೆ’ ಎಂದು ಜಿಲ್ಲಾ ಕಾಂಗ್ರೆಸ್ ಯುವ ಘಟಕದಅಧ್ಯಕ್ಷ ಕೆ.ಆರ್.ನಾಗೇಶ್ ಹೇಳಿದರು.</p>.<p>ತಾಲ್ಲೂಕಿನ ಕುಂದಾಣ ಪ್ರಾಥಮಿಕ ಆರೋಗ್ಯ ಕೇಂದ್ರದ ಆವರಣದಲ್ಲಿ ಜಿಲ್ಲಾ ಯುವ ಕಾಂಗ್ರೆಸ್ ಘಟಕದಿಂದ ಒಂದು ಸಾವಿರ ಮಾಸ್ಕ್ ಹಾಗೂ ಅಗತ್ಯ ಔಷಧಗಳನ್ನು ವೈದ್ಯರಿಗೆ ಹಸ್ತಾಂತರಿಸಿ ಮಾತನಾಡಿದರು.</p>.<p>ಕೋವಿಡ್ ಸೋಂಕು ಗಂಭೀರ ಸ್ವರೂಪ ಪಡೆದುಕೊಂಡಿರುವ ಕಾರಣದಿಂದ ಅಷ್ಟಾಗಿ ಹೆಚ್ಚಿನ ಸಂಖ್ಯೆಯಲ್ಲಿ ದಾನಿಗಳು ಮುಂದೆ ಬರುತ್ತಿಲ್ಲ. ಮುಂದೆ ನಿಂತು ಜನರ ಕಷ್ಟಗಳನ್ನು ಆಲಿಸಬೇಕಾಗಿದ್ದ ಸರ್ಕಾರ, ನಿಷ್ಕ್ರೀಯವಾಗಿದೆ ಎಂದರು.</p>.<p>ಕೊರೊನಾ 2ನೇ ಅಲೆಯಿಂದ ವೈದ್ಯರು, ಶುಶ್ರೂಷಕಿಯರು, ಆಶಾ ಕಾರ್ಯಕರ್ತೆಯರು, ಶ್ರಮಿಕರಿಗೆ ಸರ್ಕಾರ ₹10 ಸಾವಿರ ಸಹಾಯಧನ ನೀಡಬೇಕು ಎಂದು ಒತ್ತಾಯಿಸಿದರು.</p>.<p>ಈಗಾಗಲೇ ಕ್ಷೇತ್ರದಲ್ಲಿ ಜನರಿಗೆ ಅಗತ್ಯವಾಗಿರುವ ರಕ್ಷಣಾ ಸಾಮಗ್ರಿಗಳ ಜತೆಗೆ ಉಚಿತ ಆಂಬುಲೆನ್ಸ್ ಸೇವೆಗಳನ್ನು ಒದಗಿಸಲಾಗುತ್ತಿದೆ ಎಂದರು.</p>.<p>ದೇವನಹಳ್ಳಿ ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷ ಶಾಂತ್ ಕುಮಾರ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದೇವನಹಳ್ಳಿ/ವಿಜಯಪುರ: ‘</strong>ಸರ್ಕಾರ ಕೋವಿಡ್ ನಿಯಂತ್ರಿಸುವಲ್ಲಿ ವಿಫಲವಾಗಿದೆ. ರಾಜ್ಯದ ಜನರ ರಕ್ಷಣೆಗೆ ಕಾಂಗ್ರೆಸ್ ಪಕ್ಷ ಅಣಿಯಾಗಿ ನಿಂತಿದ್ದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ಮಾರ್ಗದರ್ಶನದಲ್ಲಿ ಆರೋಗ್ಯ ರಕ್ಷಣೆಗೆ ಪಣ ತೊಟ್ಟಿದ್ದೇವೆ’ ಎಂದು ಜಿಲ್ಲಾ ಕಾಂಗ್ರೆಸ್ ಯುವ ಘಟಕದಅಧ್ಯಕ್ಷ ಕೆ.ಆರ್.ನಾಗೇಶ್ ಹೇಳಿದರು.</p>.<p>ತಾಲ್ಲೂಕಿನ ಕುಂದಾಣ ಪ್ರಾಥಮಿಕ ಆರೋಗ್ಯ ಕೇಂದ್ರದ ಆವರಣದಲ್ಲಿ ಜಿಲ್ಲಾ ಯುವ ಕಾಂಗ್ರೆಸ್ ಘಟಕದಿಂದ ಒಂದು ಸಾವಿರ ಮಾಸ್ಕ್ ಹಾಗೂ ಅಗತ್ಯ ಔಷಧಗಳನ್ನು ವೈದ್ಯರಿಗೆ ಹಸ್ತಾಂತರಿಸಿ ಮಾತನಾಡಿದರು.</p>.<p>ಕೋವಿಡ್ ಸೋಂಕು ಗಂಭೀರ ಸ್ವರೂಪ ಪಡೆದುಕೊಂಡಿರುವ ಕಾರಣದಿಂದ ಅಷ್ಟಾಗಿ ಹೆಚ್ಚಿನ ಸಂಖ್ಯೆಯಲ್ಲಿ ದಾನಿಗಳು ಮುಂದೆ ಬರುತ್ತಿಲ್ಲ. ಮುಂದೆ ನಿಂತು ಜನರ ಕಷ್ಟಗಳನ್ನು ಆಲಿಸಬೇಕಾಗಿದ್ದ ಸರ್ಕಾರ, ನಿಷ್ಕ್ರೀಯವಾಗಿದೆ ಎಂದರು.</p>.<p>ಕೊರೊನಾ 2ನೇ ಅಲೆಯಿಂದ ವೈದ್ಯರು, ಶುಶ್ರೂಷಕಿಯರು, ಆಶಾ ಕಾರ್ಯಕರ್ತೆಯರು, ಶ್ರಮಿಕರಿಗೆ ಸರ್ಕಾರ ₹10 ಸಾವಿರ ಸಹಾಯಧನ ನೀಡಬೇಕು ಎಂದು ಒತ್ತಾಯಿಸಿದರು.</p>.<p>ಈಗಾಗಲೇ ಕ್ಷೇತ್ರದಲ್ಲಿ ಜನರಿಗೆ ಅಗತ್ಯವಾಗಿರುವ ರಕ್ಷಣಾ ಸಾಮಗ್ರಿಗಳ ಜತೆಗೆ ಉಚಿತ ಆಂಬುಲೆನ್ಸ್ ಸೇವೆಗಳನ್ನು ಒದಗಿಸಲಾಗುತ್ತಿದೆ ಎಂದರು.</p>.<p>ದೇವನಹಳ್ಳಿ ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷ ಶಾಂತ್ ಕುಮಾರ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>