ತಾಲ್ಲೂಕಿನಲ್ಲಿ ಕೋವಿಡ್ ಎರಡನೇ ಅಲೆ ತೀವ್ರತೆ ಇರುವಾಗ ಆರಂಭದಲ್ಲಿ ಆಮ್ಲಜನಕ, ಬೆಡ್ಗಳ ಕೊರತೆ ಸೇರಿದಂತೆ ಹಲವಾರು ಸಮಸ್ಯೆಗಳಿದ್ದವು. ಅವೆಲ್ಲವನ್ನೂ ತಾಲ್ಲೂಕು ಆಡಳಿತ ಹಾಗೂ ಆರೋಗ್ಯ ಇಲಾಖೆ ಸಮರ್ಪಕ ವಾಗಿ ಎದುರಿಸಿದೆ. ಈಗ ಮೂರನೇ ಅಲೆ ತಡೆಗೆ ಮುಂಜಾಗ್ರತೆ ವಹಿಸಲಾಗುತ್ತಿದೆ. ಆದರೆ, ಸಮಸ್ಯೆ ತೀವ್ರ ಗೊಳ್ಳುವುದಕ್ಕೆ ಮುನ್ನ ನಾವೆಲ್ಲರೂ ಎಚ್ಚರಿಕೆ ವಹಿಸಬೇಕಿದೆ ಎಂದು ಹೇಳಿದರು.