ವಿಜಯಪುರ:ಪಟ್ಟಣದಲ್ಲಿ ಸೆ. 17ರಂದು ಲಸಿಕಾ ಮಹಾಮೇಳ ಆಯೋಜನೆ ಮಾಡಲಾಗಿದೆ.
ಶಿಡ್ಲಘಟ್ಟ ಕ್ರಾಸ್ನಲ್ಲಿರುವ ಮಹೇಶ್ವರಮ್ಮ ದೇವಸ್ಥಾನದ ಹತ್ತಿರ, ಶಾಂತಿನಗರ ಓಂಶಕ್ತಿ ದೇವಸ್ಥಾನ ಹತ್ತಿರ, ಜೆ.ಸಿ. ಬಡಾವಣೆಯ ಅಂಗನವಾಡಿ ಕೇಂದ್ರದ ಹತ್ತಿರ, ಸಮುದಾಯ ಆರೋಗ್ಯ ಕೇಂದ್ರದಲ್ಲಿ ಲಸಿಕೆ ನೀಡಲಾಗುತ್ತದೆ.
18 ವರ್ಷ ಮೇಲ್ಪಟ್ಟ ಸಾರ್ವಜನಿಕರು ಅವಕಾಶ ಸದುಪಯೋಗ ಮಾಡಿಕೊಂಡು ಕೋವಿಡ್ ಮೂರನೇ ಅಲೆಯನ್ನು ಸಮರ್ಥವಾಗಿ ಎದುರಿಸಲು ಶಕ್ತರಾಗಬೇಕು ಎಂದು ಪುರಸಭೆ ಮುಖ್ಯಾಧಿಕಾರಿ ಎ.ಬಿ. ಪ್ರದೀಪ್ ಕುಮಾರ್ ಪ್ರಕಟಣೆಯಲ್ಲಿ ಮನವಿ ಮಾಡಿದ್ದಾರೆ.