ತಾಲ್ಲೂಕು ಪಂಚಾಯಿತಿ ಸಭಾಗಂಗಣದಲ್ಲಿ ಶನಿವಾರ ವಿವಿಧ ಇಲಾಖೆ ಅಧಿಕಾರಿಗಳ ತುರ್ತು ಸಭೆಯಲ್ಲಿ ಮಾತನಾಡಿದ ಜಿಲ್ಲಾಧಿಕಾರಿ ‘ನಾಲ್ಕು ಗೋಡೆಗಳ ನಡುವೆ ಕಳಿತುಕೊಂಡರೆ ಯಾರೂ ನಿಮ್ಮ ಬಳಿಗೆ ಬಂದು ಲಸಿಕೆ ಹಾಕಿಸಿಕೊಳ್ಳುವುದಿಲ್ಲ. ಜನರಲ್ಲಿ ಅರಿವು ಮೂಡಿಸಬೇಕು, ಜನರು ಇರುವಲ್ಲಿಗೆ ಹೋಗಿ ಲಸಿಕೆ ಹಾಕುವ ಮೂಲಕ ಶೇ 100ರಷ್ಟು ಪ್ರಗತಿ ಸಾಧಿಸಬೇಕಿತ್ತು. ಲಸಿಕೆ ಅಭಿಯಾನ ಆರೋಗ್ಯ ಇಲಾಖೆಯ ಅಧಿಕಾರಿಗಳಷ್ಟೇ ಜವಾಬ್ದಾರಿ ಕಂದಾಯ, ಗ್ರಾಮ ಪಂಚಾಯಿತಿ, ನಗರಸಭೆ ಸೇರಿದಂತೆ ಇತರೆ ಅಧಿಕಾರಿಗಳ ಜವಾಬ್ದಾರಿಯು ಇದೆ’ ಎಂದರು.