ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೇಗೆನಹಳ್ಳಿಯಲ್ಲಿ ವ್ಯಕ್ತಿಯೊಬ್ಬರಿಗೆ ಕೋವಿಡ್ –19 ದೃಢ

Last Updated 18 ಏಪ್ರಿಲ್ 2020, 14:45 IST
ಅಕ್ಷರ ಗಾತ್ರ

‌ಆನೇಕಲ್ : ರಾಜ್ಯದ ಗಡಿಭಾಗ ಹೊಸೂರು ತಾಲ್ಲೂಕಿನ ಬೇಗೆನಹಳ್ಳಿಯಲ್ಲಿ ವಾಸವಾಗಿದ್ದ ಚೆನ್ನೈನಿಂದ ಬಂದಿದ್ದ 54ವರ್ಷದ ವ್ಯಕ್ತಿಯೊಬ್ಬರಲ್ಲಿ ಕೋವಿಡ್‌ –19 ದೃಢಪಟ್ಟ ಹಿನ್ನೆಲೆಯಲ್ಲಿ ವ್ಯಕ್ತಿಯನ್ನು ಬೇರ್ಪಡಿಸಿ ಕುಟುಂಬದ ಐದು ಜನರನ್ನು ಕ್ವಾರೆಂಟೈನ್‌ಗೆ ತಮಿಳುನಾಡು ಸರ್ಕಾರ ಒಳಪಡಿಸಿದೆ.

ತಮಿಳುನಾಡಿನ ಈ ಗ್ರಾಮ ಅತ್ತಿಬೆಲೆ ಸಮೀಪದ ಚಿಕ್ಕನಹಳ್ಳಿಗೆ ಹೊಂದಿಕೊಂಡಿದೆ. ಈ ಹಿನ್ನೆಲೆಯಲ್ಲಿ ಆನೇಕಲ್‌ ತಹಶೀಲ್ದಾರ್‌ ಸಿ.ಮಹಾದೇವಯ್ಯ ಚಿಕ್ಕನಹಳ್ಳಿ ಗ್ರಾಮಕ್ಕೆ ಭೇಟಿ ನೀಡಿ ತಮಿಳುನಾಡಿನಿಂದ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ಮೂರು ರಸ್ತೆಗಳನ್ನು ಬಂದ್‌ ಮಾಡಿಸಿದ್ದಾರೆ.

ಸೋಂಕು ಪ್ರಕರಣ ಕಂಡು ಬಂದ ಹಿನ್ನೆಲೆಯಲ್ಲಿ ಗ್ರಾಮವನ್ನು ತಮಿಳುನಾಡು ಸರ್ಕಾರ ಸಂಪೂರ್ಣ ಸೀಲ್‌ಡೌನ್‌ ಮಾಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT