ದೊಡ್ಡಬಳ್ಳಾಪುರ: ಚಾಲಕನ ನಿಯಂತ್ರಣ ತಪ್ಪಿದ ಲಾರಿಯೊಂದು ರಸ್ತೆ ಬದಿಯಲ್ಲಿ ನಿಂತಿದ್ದ ಕ್ರೇನ್ಗೆ ಗುದ್ದಿರುವ ಘಟನೆ ನಗರದ ಪ್ರವಾಸಿ ಮಂದಿರದ ಬಳಿ ಗುರುವಾರ ರಾತ್ರಿ ನಡೆದಿದೆ.
ಗೌರಿಬಿದನೂರಿಗೆ ತೆರಳುತ್ತಿದ್ದ ಲಾರಿಯ ಮುಂದಿನ ಚಕ್ರ ಸಿಡಿದ ಪರಿಣಾಮ, ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ಕ್ರೇನ್ಗೆ ಡಿಕ್ಕಿ ಹೊಡೆದಿದೆ ಎಂದು ತಿಳಿದು ಬಂದಿದ್ದು, ಎರಡೂ ವಾಹನಗಳು ಜಖಂಗೊಂಡಿವೆ. ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ಪ್ರಾಣಪಾಯವಾಗಿಲ್ಲ.